LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಖ್ಯಾತ ನಿರೂಪಕಿ ಅಪರ್ಣ ನಿಧನ : ಗಣ್ಯರಿಂದ ಸಂತಾಪ

ಬೆಂಗಳೂರು(ಜು.11) ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಮೂರು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಇಂದು ಸಂಜೆ  ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.

ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ ಆಯತಪ್ಪಿ ಬಿದ್ದು ಗಾಯಮಾಡಿಕೊಂಡಿದ್ದರು. ಹೀಗಾಗಿ ಹಲವು ದಿನಗಳ ವಿಶ್ರಾಂತಿ ಪಡೆದಿದ್ದರು. ಅಪರ್ಣಾ ಸಾವು ಕನ್ನಡಗರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸಿನಿಮಾ, ಟಿವಿ, ಸಾಹಿತ್ಯ ಲೋಕ ಸೇರಿದಂತೆ ಹಲವು ದಿಗ್ಗಜರು ಅಪರ್ಣಾ ಸಾವಿನ ಸುದ್ದಿಗೆ ಆಘಾತ ವ್ಯಕ್ತಪಡಿಸಿದ್ದಾರೆ.

ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ  ಸೂಚಿಸಿದ್ದಾರೆ. ಅಪರ್ಣಾ ನಿಧನದ ಸುದ್ದಿ ಕೇಳಿ ನೋವಾಯ್ತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಅಪರ್ಣಾ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಕಂಬನಿ ಮಿಡಿದಿದ್ದಾರೆ. ಅಪರ್ಣಾ ನಿಧನಕ್ಕೆ ಬಿವೈ ವಿಜಯೇಂದ್ರ, ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ.  ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು.

90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್