LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಉತ್ತಮ ಸಾಧನೆ ಮಾಡಿದ ಅಧಿಕಾರಿಗಳಿಗೆ ಅಭಿನಂದನೆ

ಬಾಗಲಕೋಟೆ: ಜುಲೈ ೧೩ : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಪ್ರಗತಿ ಸಾಧಿಸಿ ಮಾದರಿ ಕಾರ್ಯನಿರ್ವಹಣೆ ಮಾಡಿದ ಬೂತ ಮಟ್ಟದ ಅಧಿಕಾರಿ ಅನ್ನಪೂರ್ಣ ಗೌರಿ ಮತ್ತು ಶಾಮಲಾ ಪೂಜಾರಿ ಅವರಿಗೆ ತಾಲೂಕಾ ಆಡಳಿತದ ವತಿಯಿಂದ ಸನ್ಮಾನ ಮಾಡುವ ಮೂಲಕ ಅಭಿನಂದನೆ ಸಲ್ಲಿಸಲಾಯಿತು.
ಬಾಗಲಕೋಟೆ ತಾಲೂಕಿನ ಕಲಾದಗಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಸೊಕನಾದಗಿ ಗ್ರಾಮದ ಮತಗಟ್ಟೆ ಸಂಖ್ಯೆ ೧೬೩ರಲ್ಲಿ ಎನ್ಯೂಮರೇಷನ್ ಹಂಚಿಕೆ ಹಾಗೂ ಗಣಕೀಕರಣ ಕಾರ್ಯದಲ್ಲಿ ಶೇ.೧೦೦ ರಷ್ಟು ಪ್ರಗತಿ ಸಾಧಿಸಿದ ಅನ್ನಪೂರ್ಣ ಗೌರಿ ಹಾಗೂ ಇದೇ ಹೋಬಳಿಯ ಮುರನಾಳ ವೃತ್ತದ ಆನದಿನ್ನಿ ಗ್ರಾಮದ ಮತಗಟ್ಟೆ ಸಂಖ್ಯೆ ೧೭೧ರಲ್ಲಿ ಎನ್ಯೂಮರೇಷನ್ ಹಂಚಿಕೆ ಹಾಗೂ ಗಣಕೀಕರಣ ಕಾರ್ಯದಲ್ಲಿ ಶೇ.೧೦೦ ರಷ್ಟು ಪ್ರಗತಿ ಸಾಧಿಸಿದ ಶಾಮಲಾ ಪೂಜಾರಿ ಅವರಿಗೆ ಉಪ ವಿಭಾಗಾಧಿಕಾರಿ ಮಹೇಶಕುಮಾರ ಮಾಲಗಿತ್ತಿ ಹಾಗೂ ತಹಶೀಲ್ದಾರ ವಾಸುದೇವ ಸ್ವಾಮಿ ಅವರು ಸನ್ಮಾನ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದರು. 
ಅಭಿನಂದನಾ ಕಾರ್ಯದಲ್ಲಿ ಉಪ ತಹಶೀಲ್ದಾರ ಕಲಾದಗಿ, ಕಚೇರಿ ಶಿರಸ್ತೆದಾರ ಎನ್.ಜಿ.ಕುಲಕರ್ಣಿ, ಗ್ರಾಮ ಆಡಳಿತ ಅಧಿಕಾರಿ ಮುರನಾಳ ವೃತ್ತ, ನೋಡಲ್ ಅಧಿಕಾರಿ ಪರಮೇಶ್ವರ ಚಲವಾದಿ, ಸೊಕನಾದಗಿ ಗ್ರಾಮ ಆಡಳಿತ ಅಧಿಕಾರಿ ಪಿರಗನ್ನವರ ಸೇರಿದಂತೆ ಇತರರು ಇದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್