LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಎಲ್ಲಾ ವಲಯಗಳಲ್ಲೂ ಕಾಂಗ್ರೆಸ್ ಸರ್ಕಾರ ವಿಫಲ: ಆರ್.ಅಶೋಕ್ ವಾಗ್ದಾಳಿ

ಮೈಸೂರು,17: : ಮುಂಬರುವ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿದ, ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಸೋಲಿಸುವ ಗುರಿ ಹೊಂದಿದ್ದೇವೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗುರುವಾರ ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಾತನಾಡಿದ ಅವರ, ಮೇಲ್ಮನೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬಹುಮತ ಹೊಂದಿರುವುದ್ದು ಹಾಗೂ ಎಲ್ಲಾ ವಲಯಗಳಲ್ಲೂ ಕಾಂಗ್ರೆಸ್ ಸರ್ಕಾರ ವಿಫಲವಾಗಿರುವ ಕಾರಣ ಆ ಪಕ್ಷಕ್ಕೆ ಸೋಲು ಕಾಣವಂತೆ ಮಾಡಬೇಕಿದೆ ಎಂದು ಹೇಳಿದರು.

ಮನೆಹಾಳ ಕಾಂಗ್ರೆಸ್‌ ಒಂದು ವರ್ಷವಾದರೂ ಒಳ್ಳೆಯ ಕೆಲಸ ಮಾಡಲಿಲ್ಲ.ಮೊನ್ನೆ ನೇಹಾಳ ಹತ್ಯೆ ಆಯಿತು, ಮಣ್ಣು ಇನ್ನೂ ಆರಿಲ್ಲ. ಇದೀಗ ಮತ್ತೆ ಅಂಜಲಿ ಎನ್ನುವ ಹೆಣ್ಣು ಮಗುವಿನ ಹತ್ಯೆಯಾಗಿದೆ. ಈ ರೀತಿ ಹೆಣ್ಣು ಮಕ್ಕಳು ಹತ್ಯೆ ಆಗುತ್ತಿರೋದು ಸರ್ಕಾರ ಸಂಪೂರ್ಣ ಹದಗೆಟ್ಟಿರೋದಕ್ಕೆ ಸಾಕ್ಷಿ. ರಾಜ್ಯದಲ್ಲಿ ಪೋಲಿಸ್ ಇಲಾಖೆ ಬದುಕಿದಿಯಾ? ಸರ್ಕಾರ ಬದುಕಿದೆಯಾ ಸತ್ತಿದೆಯಾ? ಎಂದು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಕಾಲುಗುಣ ಅಂತಹದ್ದು, ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದಲ್ಲಿ ಬರಗಾಲದ ಬಂದಿದೆ. ಸರ್ಕಾರ ಬರಗಾಲ ಸರಿಯಾಗಿ ನಿಭಾಯಿಸುತ್ತಿಲ್ಲ. ಕೇಂದ್ರ ಸರ್ಕಾರ 3545 ಕೋಟಿ ಪರಿಹಾರ ನೀಡಿದೆ. ಕೇಂದ್ರ ಸರ್ಕಾರ ಹಣಕ್ಕೊಟ್ಟರೂ ಸಿದ್ದರಾಮಯ್ಯ ಏಕೆ ಇನ್ನೂ ಬಿಡುಗಡೆ ಮಾಡುತ್ತಿಲ್ಲ ಅಂದರೆ ಸಿದ್ದರಾಮಯ್ಯ ಸರ್ಕಾರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಎಂಟು ತಿಂಗಳಿಂದ ರೈತರ ಹಾಲಿಗೆ ಹಣವನ್ನು ಕೊಟ್ಟಿಲ್ಲ, ಆಂಬುಲೆನ್ಸ್ ಚಾಲಕರಿಗೆ ಹಣಕೊಟ್ಟಿಲ್ಲ, ಗೆಸ್ಟ್ ಲಚ್ಚರರ್ ಗೆ ವೇತನ ಕೊಟ್ಟಿಲ್ಲ. ಹೀಗೆ ಆದರೆ ಪಕ್ಕದ ಕೇರಳ ರಾಜ್ಯ ಆದ ರೀತಿ ಕರ್ನಾಟಕ ಪಾಪರ್ ಆಗುತ್ತೆ. ಪಾಕಿಸ್ತಾನದಲ್ಲಿ ಹಾಲಿನ ಬೆಲೆ, ಅಕ್ಕಿ ಬೆಲೆ, ಟೀ ಬೆಲೆ , ಗೋದಿ ಹಿಟ್ಟು ಬೆಲೆ ನೋಡಿದರೆ ಆ ಪರಿಸ್ಥಿತಿ ಸಿದ್ದರಾಮಯ್ಯ ಸರ್ಕಾರ ಬರಲಿದೆ ಎನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ