LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ವಶಕ್ಕೆ ಪಡೆದಿದೆ

ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ವಶಕ್ಕೆ ಪಡೆದಿದೆ. ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದೆ.


ಚನ್ನಪಟ್ಟಣ ಜಿದ್ದಾಜಿದ್ದಿ: ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ಮಧ್ಯೆ ನೇರ ಪೈಪೋಟಿ ಉಂಟಾಗಿತ್ತು. ಅಂತಿಮ ಸುತ್ತಿನ ಬಳಿಕ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಅವರು 82229 ಮತ ಪಡೆದು ಸೋತರು. ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್​ ಅವರು 112642 ಮತಗಳನ್ನು ಗಳಿಸಿ, 25413 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.


ಶಿಗ್ಗಾಂವಿ ಕಣ: ಈ ಕ್ಷೇತ್ರದಲ್ಲಿ ಎನ್​ಡಿಎ ಅಭ್ಯರ್ಥಿ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಮಧ್ಯೆ ಸ್ಪರ್ಧೆ ಇತ್ತು. 12ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ 12,251 ಮತಗಳಿಂದ ಮುಂದಿದ್ದರು. ಬಳಿಕ 14ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ವೇಳೆಗೆ ಕಾಂಗ್ರೆಸ್ 83,400 ಮತ, ಬಿಜೆಪಿಯು 69972 ಪಡೆದಿದೆ. ಈ ಮೂಲಕ ಯಾಸೀರ್ ಖಾನ್ ಪಠಾಣ್ 13,428 ಮುನ್ನಡೆ ಸಾಧಿಸಿದ್ದರು. ಶಿಗ್ಗಾಂವಿಯಲ್ಲಿ 16ನೇ ಸುತ್ತಿನಲ್ಲಿ ಕಾಂಗ್ರೆಸ್ 13448 ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ 93,234 ಮತ ಪಡೆದರೆ, ಬಿಜೆಪಿಯ ಭರತ್ ಬೊಮ್ಮಾಯಿಗೆ 79,756 ಮತಗಳು ಬಂದಿವೆ. ಯಾಸೀರ್ ಪಠಾಣ್ ಗೆದ್ದಿದ್ದು, ಭರತ್ ಬೊಮ್ಮಾಯಿ ಸೋಲನುಭವಿಸಿದ್ದಾರೆ.

ಸಂಡೂರಲ್ಲಿ ಎನ್​ಡಿಎ ಅಭ್ಯರ್ಥಿ ಬಂಗಾರು ಹನಮಂತು ಮತ್ತು ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಮಧ್ಯೆ ನೇರ ಹಣಾಹಣೆ ಉಂಟಾಗಿದೆ.  ಸಂಡೂರಿನಲ್ಲಿ ಅಂತಿಮ ಹಂತದ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್ 93,616 ಮತ್ತು ಬಿಜೆಪಿ 83967 ಮತ ಪಡೆದಿದೆ. ಅನ್ನಪೂರ್ಣ ತುಕಾರಾಂ 9649 ಮತಗಳ ಅಂತರದಿಂದ ಗೆದ್ದಿದ್ದಾರೆ.

ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆದ್ದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಆಯಾ ಕ್ಷೇತ್ರದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ