LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ?

ಚಿಕ್ಕಬಳ್ಳಾಪುರ, (ಜೂನ್.5): ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಡಾ. ಕೆ.ಸುಧಾಕರ್ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ವಿರುದ್ದ 1,62,099 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ಯಾವಾಗ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆಗಳು ಜೋರಾಗಿಯೇ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ಟ್ರೋಲ್ ಆಗುತ್ತಿದ್ದಾರೆ. ಇದರ ಮಧ್ಯೆ ಪ್ರದೀಪ್ ಈಶ್ವರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಕಾರಣ ಅವರ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ.

ಏನೇ ಮಾಡಿದರೂ ಸುಧಾಕರ್ ಈ ಲೋಕಸಭಾ ಚುನಾವಣೆಯಲ್ಲೂ ಗೆಲ್ಲಲ್ಲ ಎಂದು ಪ್ರದೀಪ್ ಈಶ್ವರ್ ಭವಿಷ್ಯ ಹೇಳುತ್ತಲೇ ಬಂದಿದ್ದರು. ಪ್ರಚಾರ ಸಭೆಗಳಲ್ಲಿ, ಹೋದರಲ್ಲಿ ಬಂದಲ್ಲಿ ಇದೇ ಡೈಲಾಗ್ ಹೊಡೆಯುತ್ತಿದ್ದರು. ಅಲ್ಲದೇ ಇನ್ನೊಂದೆಜ್ಜೆ ಮುಂದೆ ಹೋಗಿ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ಗಿಂತ ಒಂದೇ ಒಂದು ಹೆಚ್ಚು ಮತ ತೆಗೆದುಕೊಂಡರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಹಾಗೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಜೋಶ್ನಲ್ಲಿ ಸವಾಲು ಹಾಕಿದ್ದರು. ಆದ್ರೆ, ಇದೀಗ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲೇ 20,941 ಮತಗಳ ಮುನ್ನಡೆಯನ್ನು ಡಾ ಕೆ ಸುಧಾಕರ್‌ ಸಾಧಿಸಿದ್ದಾರೆ. ಇದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಳಿಕ ಅತಿಹೆಚ್ಚು ಲೀಡ್‌ ಬಂದಿಉವುದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲೇ.

ಪ್ರದೀಪ್ ಈಶ್ವರ್ ರಾಜೀನಾಮೆ ಯಾವಾಗ? ಎಂದು ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಪ್ರದೀಪ್ ಈಶ್ವರ್ ಆಡಿದ್ದ ರಾಜೀನಾಮೆ ಮಾತಿನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ಟ್ರೋಲ್ ಮಾಡಲಾಗುತ್ತಿದ್ದು, ಡೈಲಾಗ್ ಕಿಂಗ್ ರಾಜೀನಾಮೆ ಯಾವಾಗ ಅಂತೆಲ್ಲಾ ನೆಟ್ಟಿಗರು ಕೇಳುತ್ತಿದ್ದಾರೆ. ಇದರ ಮಧ್ಯೆ ಇದೀಗ ಪ್ರದೀಪ್ ಈಶ್ವರ್ ಅವರ ಹೆಸರಿನ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಆದ್ರೆ, ಈ ಪತ್ರ ನಕಲಿ ಎಂದು ಸ್ವತಃ ಪ್ರದೀಪ್ ಈಶ್ವರ್ ಸ್ಪಷ್ಟಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ