LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನರೇಗಾ ಹೆಸರು ಬದಲಾವಣೆ ವಿರುದ್ದ ಕಾಂಗ್ರೆಸ್ ಪ್ರತಿಭಟನಾ ಧರಣಿ

ಬಳ್ಳಾರಿ, ಜ.31..: ನಗರದ ಡಿಸಿ ಕಚೇರಿ ಎದುರಿನ ಮಹಾತ್ಮಾ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಕಾಂಗ್ರೆಸ್ ಜಿಲ್ಲಾ ಘಟಕದಿಂದ ನರೇಗಾ ಹೆಸರು ಬದಲಾವಣೆ ವಿರುದ್ದ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ನೇತೃತ್ವದಲ್ಲಿ    ತಲೆಗೆ ಟವಲ್ ಕಟ್ಟಿಕೊಂಡು   ಪ್ರತಿಭಟನಾ ಧರಣಿ ನಡೆಸಲಾಯ್ತು.

ಕೇಂದ್ರ ಸರ್ಕಾರದಿಂದ ದೇಶದ ಬಡ ಜನತೆಗೆ ಅವಶ್ಯವಾದ ಉದ್ಯೋಗವನ್ನು ನೀಡುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಬದಲಾವಣೆ ಮಾಡಿರುವುದರ ವಿರುದ್ದ ಧರಣಿಯಲ್ಲಿ ಪಾಲ್ಗೊಂಡಿದ್ದ ಮುಖಂಡರು, ಕಾರ್ಯಕರ್ತರು ಘೋಷಣೆ ಕೂಗಿ. ನರೇಗಾ ಹೆಸರು ಬದಲಾವಣೆ ಮಾಡದಂತೆ ಆಗ್ರಹಿಸಲಾಯ್ತು.

ಈ ವೇಳೆ ಮಾತನಾಡಿದ ಮುಖಂಡರು. ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಮುಖ್ಯ ಕಾರಣರಾದ ಮಹಾತ್ಮಾ ಗಾಂಧಿಯ ಹೆಸರನ್ನೇ ತೆಗೆದು. ಅದನ್ನು ಜಿ. ರಾಮ್ ಜಿ ಎಂದು ಬದಲಾವಣೆ ಮಾಡಿರುವ ಬಿಜೆಪಿ ಧೋರಣೆಯನ್ನು ವಿರೋಧಿಸಲಾಯ್ತು.

ಯೋಜನೆಯಲ್ಲಿ ಆಗುತ್ತಿದ್ದ ಭ್ರಷ್ಟಾಚಾರ ತಡೆಯಲು "ವಿಕಸಿತ ಭಾರತ ಗ್ಯಾರೆಂಟಿ  ಫರ್ ರೋಜಗಾರ್ ಆಜೀವಿಕ  ಮಿಷನ್  ಗ್ರಾಮೀಣ" ಎಂದು ಬದಲು ಮಾಡಿದೆ ಎಂದು ಹೇಳುತ್ತಿದೆ ಬಿಜೆಪಿ. ಭ್ರಷ್ಟಾಚಾರ ತಡೆಯಲಿ ಆದರೆ ಮಹಾತ್ಮನ ಹೆಸರು ಬದಲಾವಣೆ ಯಾಕೆ ಬೇಕು. ಜೊತೆಗೆ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಹೊರೆ ಮಾಡಿ, ಬಡವರ ಹೊಟ್ಟೆಗೆ ಕಂಟಕ ತರುವ ರೀತಿಯಲ್ಲಿ ಕಾಯ್ದೆ ತಿದ್ದುಪಡಿ ಅವಶ್ಯ ಇಲ್ಲ ಎನ್ನಲಾಯ್ತು.

ಪ್ರತಿಭಟನೆಯಲ್ಲಿ ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಮಾಧ್ಯಮ ವಕ್ತಾರ ವೆಂಕಟೇಶ್ ಹೆಗಡೆ, ಪ್ರಚಾರ ಸಮಿತಿಯ ಈರನಗೌಡ, ಮುಖಂಡರುಗಳಾದ ಎ.ಮಾನಯ್ಯ, ಕಮಲಮ್ಮ, ಹೆಚ್.ಸಿದ್ದೇಶ್, ಅಲುವೇಲು ಸುರೇಶ್ ಮೊದಲಾದವರು ಪಾಲ್ಗೊಂಡಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ