LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ






ಬಳ್ಳಾರಿ,ಮಾ.23.

ಸಮಾಜಕ್ಕೆ ಶಾಪವಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಮತ್ತು ಅಂತಹ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಸಹಕರಿಸುವಂತೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ಶಾರೀರಿಕ, ಮಾನಸಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಮಾರಕವಾಗಿದೆ. ಬಡತನ ಹಾಗೂ ಅಜ್ಞಾನದ ಕಾರಣದಿಂದ ಅನೇಕ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ದುಡಿಮೆಗೆ ಸೇರುತ್ತಿದ್ದಾರೆ. ಈ ಪಿಡುಗನ್ನು ಹೋಗಲಾಡಿಸಲು ಜಿಲ್ಲಾಡಳಿತವು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳು, ಪತ್ತೆ ಹಚ್ಚುವ ಕಾರ್ಯ ಮತ್ತು ಪುನರ್ವಸತಿ ಪ್ರಕ್ರಿಯೆಗಳನ್ನು ನಡೆಸುತ್ತಾ ಬಂದಿದೆ.

ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತರಾದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ವಸತಿ ಮತ್ತು ಉತ್ತಮ ಜೀವನೋಪಾಯ ಕಲ್ಪಿಸಲು ಆರ್ಥಿಕ ನೆರವಿನ ಅಗತ್ಯವಿದೆ. ಈ ಸಾಮಾಜಿಕ ಕಾರ್ಯಕ್ಕೆ ಕೈಜೋಡಿಸಲು ಇಚ್ಛಿಸುವ ದಾನಿಗಳು, ಕೈಗಾರಿಕೋದ್ಯಮಿಗಳು ಮತ್ತು ಸಾರ್ವಜನಿಕರು ಈ ಕೆಳಗಿನ ಬ್ಯಾಂಕ್ ಖಾತೆಗೆ ದೇಣಿಗೆ ನೀಡಬಹುದಾಗಿದೆ.


ಬ್ಯಾಂಕ್ ಹೆಸರು: ಕೆನರಾ ಬ್ಯಾಂಕ್ (Canara Bank)


ಖಾತೆ ಸಂಖ್ಯೆ: 110058103941


IFSC ಕೋಡ್: CNRB0007295

ಶಾಖೆ: ಬೆಂಗಳೂರು ವರ್ಕರ್ಸ್ ವೆಲ್ಫೇರ್ ಬೋರ್ಡ್ ಶಾಖೆ, ಬೆಂಗಳೂರು.

ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಅವರ ಸುಂದರ ಭವಿಷ್ಯಕ್ಕಾಗಿ ಉದಾರವಾಗಿ ಧನಸಹಾಯ ಮಾಡುವ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಅಧ್ಯಕ್ಷರು ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕೋರಿದ್ದಾರೆ.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್