LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದೇಶದ ಮೊಟ್ಟ ಮೊದಲ ರಕ್ಷಣಾ AI ತಂತ್ರಜ್ಞಾನ ಅಭಿವೃದ್ಧಿ

ಬೆಂಗಳೂರು, ಡಿಸೆಂಬರ್​​ 01: ರಕ್ಷಣಾ ವ್ಯವಸ್ಥೆಗೆ ನೆರವಾಗಬಲ್ಲ ದೇಶದ ಮೊಟ್ಟ ಮೊದಲ ‘ಸ್ವದೇಶಿ ರಕ್ಷಣಾ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ’ವನ್ನು ಕರ್ನಾಟಕ ಮೂಲದ ಸ್ಟಾರ್ಟ್‌ಅಪ್ ಕಂಪನಿ ನ್ಯೂರಾಲಿಕ್ಸ್​​ ಎಐ ಅಭಿವೃದ್ಧಿಪಡಿಸಿದೆ. ದೆಹಲಿಯ ಮಾಣಿಕ್ ಶಾ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ‘ಚಾಣಕ್ಯ ಡಿಫೆನ್ಸ್’ ಸಂವಾದದಲ್ಲಿ ಭಾರತದ ಮೊದಲ ಸಂಪೂರ್ಣ ‘ಸ್ವದೇಶೀ ರಕ್ಷಣಾ ಎಐ-ಏಸ್-ಎ-ಸರ್ವಿಸ್‌’ (ALAAS) ಅನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಡುಗಡೆ ಮಾಡಿದ್ದಾರೆ.



ಕನ್ನಡಿಗರೇ ಸ್ಥಾಪಿಸಿದ್ದ ನ್ಯೂರಾಲಿಕ್ಸ್ ಡೀಪ್ ಟೆಕ್ ಕಂಪನಿ ರಕ್ಷಣಾ ಸಚಿವಾಲಯದ IDEX ADITY 2.0 ಉಪಕ್ರಮದಡಿ ಭಾರತೀಯ ಸೇನೆಗಾಗಿ ಈ ಎಐ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಇದು ಸ್ವದೇಶಿ ಆವಿಷ್ಕಾರದ ಮೂಲಕ ಮುಂದಿನ ತಲೆಮಾರಿನ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶ ಹೊಂದಿರೋದಾಗಿ ನ್ಯೂರಾಲಿಕ್ಸ್ ಎಐ ಸಹ-ಸ್ಥಾಪಕರಾದ ವಿಕ್ರಂ ಜಯರಾಂ ಹೇಳಿದ್ದಾರೆ. ಸ್ವದೇಶಿ ರಕ್ಷಣಾ ಎಐ ಅಭಿವೃದ್ಧಿಯು ದೇಶದ ಸೈನ್ಯವನ್ನು ಬಲಪಡಿಸಿದೆ.‘ಆತ್ಮನಿರ್ಭರ ಭಾರತ’ದ ಹಾದಿಗೆ ಇದು ಮತ್ತಷ್ಟು ಶಕ್ತಿ ನೀಡಿದೆ ಎಂದು ರಾಜನಾಥ್​ ಸಿಂಗ್​​ ಕೂಡ ಅಭಿಪ್ರಾಯಪಟ್ಟಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್