LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು – ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ





ಬಳ್ಳಾರಿ,ಮಾ.03- ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ:
ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ.
ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.
ಜಿಲ್ಲಾಡಳಿತದ ಕ್ರಮಗಳು : ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24x7 ಕಾರ್ಯನಿರ್ವಹಿಸುತ್ತಿವೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.
ಸಹಾಯವಾಣಿ ಸಂಖ್ಯೆಗಳಿಗೆ : ಬಳ್ಳಾರಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಸಂಪರ್ಕಿಸಬಹುದು: ಬಳ್ಳಾರಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 08392-277100, 1077 ಟೋಲ್ ಫ್ರೀ ಸಂಖ್ಯೆ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070 ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.
ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ 'ಸಾರಥಿ ಸಹಾಯತಾ' (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.
ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್