LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದೆಹಲಿಯಲ್ಲಿ ಭೀಕರ ಕಾಲ್ತುಳಿತ; ಮುಂಜಾಗೃತೆಗಾಗಿ ಸಿಆರ್‌ಪಿಎಫ್‌ ನಿಯೋಜನೆ

ನವದೆಹಲಿ: ನವದೆಹಲಿಯ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಬಳಿಕ ಜನದಟ್ಟಣೆ ನಿರ್ವಹಣೆಗೆ ಇದೀಗ ದೆಹಲಿ ಪೊಲೀಸರೊಂದಿಗೆ ಕೇಂದ್ರ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್‌)ಯನ್ನು ನಿಯೋಜಿಸಲಾಗಿದೆ. ಹಿರಿಯ ಸಿಆರ್​ಪಿಎಫ್‌ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.


ಜನಸಂದಣಿ ನಿರ್ವಹಣೆ ಹೆಚ್ಚಿಸಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು 6 ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಗಳನ್ನು ನಿಲ್ದಾಣದಲ್ಲಿ ನಿಯೋಜಿಸಿದ್ದಾರೆ. ವಿವಿಧ ಜಿಲ್ಲೆಗಳಿಂದ ಬಂದಿರುವ ಈ ಅಧಿಕಾರಿಗಳನ್ನು ವಿಶೇಷವಾಗಿ ದೇಶದ ಅತ್ಯಂತ ಜನನಿಬಿಡ ಸಾರಿಗೆ ಕೇಂದ್ರಗಳ ಪೈಕಿ ಒಂದಾದ ನವದೆಹಲಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.


ಈಗಾಗಲೇ ದಟ್ಟಣೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವ, ಯಶಸ್ವಿಯಾಗಿ ನಿರ್ವಹಿಸಿರುವ ವಿವಿಧ ಜಿಲ್ಲೆಗಳ ಅಧಿಕಾರಿಗಳು ಇವರಾಗಿದ್ದಾರೆ. ಇವರಲ್ಲಿ ಕೆಲವರು ನಿಲ್ದಾಣಗಳಲ್ಲಿ ಎಸ್​ಎಚ್​ಒ ಆಗಿ ಕಾರ್ಯನಿರ್ವಹಿಸಿದ್ದು, ಜನಸಂದಣಿಯಲ್ಲಿ ಲಾಜಿಸ್ಟಿಕ್​ ಮತ್ತು ಭದ್ರತಾ ಸವಾಲುಗಳನ್ನು ಅರ್ಥೈಸಿಕೊಂಡು ಕೆಲಸ ಮಾಡಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್