Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಧರಗಡ್ಡೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಬಳ್ಳಾರಿ, ಮೇ.08. ಶ್ರೀಧರಗಡ್ಡೆಯ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ, ಎರ್ರಿಸ್ವಾಮಿ ತೊಗಲುಗೊಂಬೆ ಕಲಾ ಮೇಳ ಟ್ರಸ್ಟ್(ರಿ)ಬಳ್ಳಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ವಿಶೇಷ ಘಟಕ ಯೋಜನೆ ಅಡಿಯಲ್ಲಿ "ಜಾನಪದ ಸಂಭ್ರಮ" ಎನ್ನುವ ಶೀರ್ಷಿಕೆ ಮಾಲಿಕೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಉದ್ಘಾಟಿಸಿದ ಪರಮಪೂಜ್ಯ ಶ್ರೀಮರಿ ಕೊಟ್ಟೂರು ದೇಶಿಕರು, ನಿಯೋಜಿತ ಉತ್ತರಾಧಿಕಾರಿಗಳು ಶ್ರೀ ಜಗದ್ಗುರು ಕೊಟ್ಟೂರು ಸ್ವಾಮಿ ಸಂಸ್ಥಾನ ಮಠ ಶ್ರೀಧರಗಡ್ಡೆ ಇವರು ತಮ್ಮ ಅಶಿರ್ವಚನವನ್ನು ನೀಡುತ್ತಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತುಂಬಾ ಉತ್ತಮವಾದ ಕೆಲಸವನ್ನು ಮಾಡುತ್ತಿದೆ ಈ ತರಹದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಳ್ಳಿಗಳಲ್ಲಿ ಹಮ್ಮಿಕೊಳ್ಳುತ್ತಿರುವುದು ತುಂಬಾ ಸ್ವಾಗತಾರ್ಹ, ಈಗಿನ ಜನರು ಪಾಶ್ಚಾತ್ಯ ಸಂಸ್ಕೃತಿಗೆ ಮಾರುವಾಗದೆ ನಮ್ಮ ಹಳ್ಳಿಗಾಡಿನ ಕಲೆಗಳಾದ ತೊಗಲುಗೊಂಬೆ, ಜನಪದ,ಬಯಲಾಟ ಈ ತರಹದ ಕಲೆಗಳನ್ನು ಮಕ್ಕಳಿಗೆ ಕಲಿಸಲು ಹೆಚ್ಚು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿ. ನಾಗರಾಜ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮಾತನಾಡುತ್ತಾ ಶ್ರೀಧರಗಡ್ಡೆಯು ಕಲೆಗಳ ತವರೂರು ಈ ಊರಿನಲ್ಲಿ ಪ್ರಸಿದ್ಧ ಕಲಾವಿದರು ಕಲಾ ಪೋಷಕರು ಇರುವುದು ತುಂಬಾ ಸಂತೋಷದ ಸಂಗತಿ ಎಂದು ತಿಳಿಸಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಂದೀಶ್ ಮುಖಂಡರು ಶ್ರೀಧರ್ ಗಡ್ಡೆ. ನಮ್ಮ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದರು ನಾವು ತನು,ಮನ,ಧನ ಗಳಿಂದ ಪ್ರೋತ್ಸಾಹಿಸುತ್ತೇವೆ ಎಂದು ತಮ್ಮ ಅಧ್ಯಕ್ಷತೆ ನುಡಿಗಳನ್ನು ಆಡಿದರು ವೇದಿಕೆಯ ಮೇಲೆ ದೊಡ್ಡಬಸಪ್ಪ ಯಾಟಿ ಗೌರಿ ಹಳ್ಳಿಮನೆ ಮಾಲೀಕರು ಬಳ್ಳಾರಿ, ಎಸ್.ಡಿ. ವೀರನಗೌಡ ಉದ್ಯಮಿಗಳು ಶ್ರೀಧರಗಡ್ಡೆ, ಎ ಜಂಬನಗೌಡ ಬಸವೇಶ್ವರ ಯುವಕ ಸಂಘ ಶ್ರೀಧರಗಡ್ಡೆ, ನಾಗೇಂದ್ರಪ್ಪ ಅಧ್ಯಕ್ಷರು ಬಸವೇಶ್ವರ ಟ್ರಸ್ಟ್ ಕಮಿಟಿ ಶ್ರೀಧರಗಡ್ಡೆ, ಪಿ. ನಿರಂಜನ್ ಮುಖಂಡರು ಶ್ರೀಧರಗಡ್ಡೆ, ಬಿ. ಬಸವರಾಜ್ ಉಪಾಧ್ಯಕ್ಷರು ಶ್ರೀ ಬಸವೇಶ್ವರ ಭಜನಾ ಮಂಡಳಿ ಶ್ರೀಧರ ಗಡ್ಡೆ, ಇನ್ನು ಮುಂತಾದವರು ಪಾಲ್ಗೊಂಡಿದ್ದರು. ವೇದಿಕೆಯ    ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಲಿಕೆಯಲ್ಲಿ ತೊಗಲಗೊಂಬೆ ಪ್ರದರ್ಶನ -ಶ್ರೀಮತಿ ಹುಲಿಗೆಮ್ಮ  ಮತ್ತು ತಂಡ ಬಳ್ಳಾರಿ, ಸುಗಮ ಸಂಗೀತ ಕು. ಸಹನಾ ಮತ್ತು ತಂಡ ಕಂಪ್ಲಿ, 
ಜಾನಪದ ನೃತ್ಯ ಕು. ಬಾನವತ ಮಾಯುಖ ಮತ್ತು ತಂಡ ಬಳ್ಳಾರಿ  ಹಾಗೂ ಕೀಬೋರ್ಡ್- ಶಿವಕುಮಾರ್ ಬಂಡಿಹಟ್ಟಿ  ತಬಲಾ-ಯೋಗೇಶ್ ಸಂಗನಕಲ್ಲು.ಈ ಕಾರ್ಯಕ್ರಮಗಳು ಸುಮಾರು ಮೂರು ತಾಸಿಗೂ ಹೆಚ್ಚು ನಡೆದವು  ಈ ಕಾರ್ಯಕ್ರಮದಲ್ಲಿ ಕಿಕ್ಕಿರಿದು ತುಂಬಿದ್ದ ಜನಸ್ತೋಮವು ಚಪ್ಪಾಳೆಗಳಿಂದ  ಕಲಾವಿದರನ್ನು ಹುರಿದುಂಬಿಸಿದರು. ಜಡೇಶ ಎಮ್ಮಿಗನೂರು ಕಾರ್ಯಕ್ರಮ ನಿರೂಪಣೆ ಮಾಡಿದರು. ಎರ್ರಿಸ್ವಾಮಿ ತೊಗಲುಗೊಂಬೆ ಕಲಾ ಮೇಳ ಟ್ರಸ್ಟ್ ನ ಅಧ್ಯಕ್ಷರಾದ ಪ್ರಭುರವರು ಪ್ರಾಸ್ತವಿಕ ಮಾತನಾಡಿದರು.  ಟ್ರಸ್ಟ್ ಕಾರ್ಯದರ್ಶಿ ಶ್ರೀಮತಿ ಪಿ. ರೇಖಾ ರವರು ವಂದಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*