LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಉಚಿತ ಬೇಸಿಗೆ ಶಿಬಿರಕ್ಕೆ ಡಿಸಿ ಸಂಗಪ್ಪ ಚಾಲನೆ

ಬಾಗಲಕೋಟೆ, ಮೇ ೧೩ : ನವನಗರದ ಜಿಲ್ಲಾ ಬಾಲಭವನದಲ್ಲಿ ೫ ರಿಂದ ೧೬ ವರ್ಷದ ಮಕ್ಕಳಿಗೆ ಹಮ್ಮಿಕೊಂಡ ಸೃಜನಾತ್ಮಕ ಹಾಗೂ ಕ್ರೀಯಾತ್ಮಕ ಚಟುವಟಿಕೆಗಳ ಉಚಿತ ಬೇಸಿಗೆ ಶಿಬಿರಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಬುಧವಾರ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡ ೧೫ ದಿನಗಳ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಶಿಬಿರದಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಕೆ.ಪ್ರಭಾಕರ ಮಾತನಾಡಿ ಮಕ್ಕಳಲ್ಲಿನ ಪ್ರತಿಭೆ ಅನಾವರಣಗೊಳಿಸುವುದು, ಆತ್ಮವಿಶ್ವಾಸ ಹೆಚ್ಚಿಸುವುದು ಹಾಗೂ ತಂಡದ ಮನೋಭಾವ ಬೆಳೆಸುವ ಉದ್ದೇಶದಿಂದ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ೧೫ ದಿನಗಳ ಉಚಿತ ತರಬೇತಿ ನೀಡಲಾಗುತ್ತದೆ. ಈ ಅವಧಿಯಲ್ಲಿ ಮಕ್ಕಳಿಗೆ  ಚಿತ್ರಕಲೆ, ಕರಕುಶಲ, ಜೇಡಿ ಮಣ್ಣಿನ ಕಲೆ, ಸಮೂಹ ಸಂಗೀತ, ಸಮೂಹ ನೃತ್ಯ ಮತ್ತು ಯೋಗ, ಕರಾಟೆ, ವಿವಿಧ ಚಟುವಟಿಕೆಗಳನ್ನು ಹೇಳಿಕೊಡಲಾಗುತ್ತದೆ ಎಂದರು. 
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಿರೂಪಣಾಧಿಕಾರಿ ಮಂಜುನಾಥ ಪರಸನ್ನವರ ಪ್ರಾರಂಭದಲ್ಲಿ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಬೇಸಿಗೆಯನ್ನು ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ೫ ರಿಂದ ೧೬ ವರ್ಷದ ಮಕ್ಕಳಿಗಾಗಿ ಸೃಜನಾತ್ಮಕ ಹಾಗೂ ಕ್ರೀಯಾತ್ಮಕ ಚಟುವಟಿಕೆಗಳನ್ನು ಒಳಗೊಂಡ ವಿಶೇಷ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ ಎಂದರು ತಿಳಿಸಿದರು. 
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ರಮೇಶ ಸೂಳಿಕೇರಿ, ಸಂಪನ್ಮೂಲ ವ್ಯಕ್ತಿಗಳಾದ ಪದ್ಮಾವತಿ ತಳ್ಳಿಕೇರಿ, ಭವಾನಿ ಕಂಬಾರ, ಸಂಸ್ಕೃತಿ ಕಾಂಬಳೆ ಹಾಗೂ ಇಲಾಖೆಯ ಸುರೇಶ ಹುಲಮನಿ, ಕಮಲಾಕ್ಷಿ ಚವ್ಹಾಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್