LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಶೋಕ್ ಎಂಜಿನಿಯರ್​ಗಳ ಕ್ಷಮೆ ಕೇಳಬೇಕೆಂದು ಡಿಸಿಎಂ ಮನವಿ

ಬೆಂಗಳೂರು: ರಾಜ್ಯದ ಎಂಜಿನಿಯರ್​​ಗಳನ್ನು ಮನೆಹಾಳರು ಎಂದು ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ ಆರ್ ಅಶೋಕ್ ಅವರು ವಿಧಾನಸಭೆಯಲ್ಲಿ ಜರಿದಿರುವುದನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಂಡಿಸಿದ್ದಾರೆ. ಅಶೋಕ್ ಅವರು ಈ ಹೇಳಿಕೆ ಹಿಂಪಡೆದುಕೊಂಡು, ಎಂಜಿನಿಯರ್​ಗಳ ಕ್ಷಮೆ ಕೇಳಬೇಕೆಂದು ಡಿಸಿಎಂ ಮನವಿ ಮಾಡಿದ್ದಾರೆ.


ಸರ್ ಎಂ ವಿಶ್ವೇಶ್ವರಯ್ಯ ಅವರಿಂದ ಹಿಡಿದು ಈಗಿನವರವರೆಗೂ ರಾಜ್ಯದ ಪ್ರಗತಿಯಲ್ಲಿ ಇಂಜಿನಿಯರ್​ಗಳ ಕೊಡುಗೆ ಗಣನೀಯವಾದದ್ದು. ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಇಂಜಿನಿಯರ್​ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಇಲ್ಲದೆ ರಾಜ್ಯ ಮತ್ತು ದೇಶದ ಪ್ರಗತಿಯನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಅಂತಹ ಪ್ರಗತಿಯ ರೂವಾರಿಗಳನ್ನು ಮನೆಹಾಳರು ಎಂದು ಅಶೋಕ್ ಅವರು ಕರೆದಿರುವುದು ಸರಿಯಲ್ಲ ಎಂದು ಶಿವಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಎಂಜಿನಿಯರ್​​ಗಳ ಕುರಿತು ಹೇಳಿಕೆಗೆ ಅಶೋಕ್ ಅವರು ತಕ್ಷಣವೇ ಇಂಜಿನಿಯರ್​ಗಳ ಕ್ಷಮಾಪಣೆ ಕೇಳಬೇಕು. ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ