LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಾಮೂಹಿಕ ರಾಜೀನಾಮೆಗೆ ಬಿಜೆಪಿಯ ಮೂಲ ಕಾರ್ಯಕರ್ತರ ನಿರ್ಧಾರ

ಜಮಖಂಡಿ; ಕ್ಷೇತ್ರದ ಮೂಲ ಬಿಜೆಪಿ ಕಾರ್ಯಕರ್ತರು ಮನನೊಂದು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾಗಿ ಮುಖಂಡ ಉಮೇಶ ಆಲಮೇಲ್ಕರ ತಿಳಿಸಿದರು. ಶುಕ್ರವಾರ ರಮಾನಿವಾಸ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಗುಡಗುಂಟಿ ಅವರಿಗೆ ಸರಿಯಾದ ಮಾಹಿತಿ ನೀಡದೇ ಕೆಲವರು ಪಕ್ಷದ ಮೂಲ ಕಾರ್ಯಕರ್ತರನ್ನು ಕಡೆಗಾಣಿಸಿ, ಪಕ್ಷದಲ್ಲಿ ಹೆಸರು ಇಲ್ಲದ, ಸಾರ್ವಜನಿಕವಾಗಿ ಪರಿಚಯ ಇಲ್ಲದವರನ್ನು ಗ್ರಾಮೀಣ ಹಾಗೂ ನಗರ ಮಂಡಲಗಳಿಗೆ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ಮೂಲ ಕಾರ್ಯಕರ್ತರಿಗೆ ಯಾವುದೇ ಜವಾಬ್ದಾರಿಗಳನ್ನು ನೀಡದೇ ಕಡೆಗಣಿಸಲಾಗಿದೆ. ಇದರಿಂದ ಮನನೊಂದು ಸಾಮೂಹಿಕ ರಾಜೀನಾಮೆ ನೀಡುತ್ತಿರುವದಾಗಿ ತಿಳಿಸಿದ್ದಾರೆ. ಹಿಂದುತ್ವ, ಹಿಂದುರಾಷ್ಟ್ರದ ಸಿದ್ಧಾಂತಕ್ಕೆ ತಲೆಬಾಗಿ ಪಕ್ಷಕ್ಕಾಗಿ ನಿಷ್ಟೆಯಿಂದ ಸೇವೆ ಸಲ್ಲಿಸಿದ್ದೇವೆ. ಪಕ್ಷದ ಗೆಲುವಿಗಾಗಿ ಶ್ರಮಿಸಿದ್ದೇವೆ. ಪಕ್ಷ ವಲಸಿಗರ ಕೈಗೆ ಸೇರಿ ನಲುಗುವಂತಾಗಿದೆ. ಮೂಲ ಕಾರ್ಯಕರ್ತರು ಪಕ್ಷದ ಹಿರಿಯ ರೊಂದಿಗೆ ಮಾತನಾಡಿಯು ಯಾವುದೇ ಪ್ರಯೋಜನವಾಗಿಲ್ಲ. ಪಕ್ಷದ ಹಿರಿಯರನ್ನು ಕಡೆಗಾಣಸಿ ಕೆಲವರು ಮಾತ್ರ ಪಕ್ಷವನ್ನು ಜಮಖಂಡಿ ಕ್ಷೇತ್ರದಲ್ಲಿ ಮಣ್ಣು ಮುಕ್ಕಿಸಿದ್ದಾರೆ ಇದರಿಂದ ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಹಾನಿಯಾಗಲಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯೆ ಮಹಾದೇವಿ ಮೂಲಿಮನಿ, ತಾಪಂ ಮಾಜಿ ಅಧ್ಯಕ್ಷೆ, ಸವಿತಾ ಕಲ್ಯಾಣಿ, ರಾಜೇಶ್ವರಿ ವಾಗ್ಮೋರೆ, ಸುಜಾತಾ ಸಾರವಾಡ, ಭೀಮಸಿ ಹಾದಿಮನಿ, ಕೃಷ್ಣಾ ರಾಥೋಡ, ಗದಿಗೆಪ್ಪ ದಾರವಾಡ, ನೇಮಿನಾಥ ಆಲಗೂರ, ರಾಜೇಶ್ವರಿ ಕೊಡಗ, ಅಡಿವೆಪ್ಪ ಇಟಗಿ, ಮಹದೇವ ನಾಯಕ, ಸಚಿನ ಜಗಣಿ, ಶಿವಾಜಿ ಸಬಕಾಳೆ, ಉಮೇಶ ಗೌಳಿ, ಅಡಿವೆಪ್ಪ ಕೊಂಕಣಿ, ರಾಜೇಶ ಅರಳಿ, ಶ್ರೀಶೈಲ ಬಾರಿಕಾಯಿ, ಸುರೇಶ ಕುಂಬಾರ, ಸಂಗಮೇಶ ನ್ಯಾಮಗೌಡ, ಲಕ್ಷ್ಮಣ ಬಂಕಿ, ಮುಂತಾದವರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ