LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜಲ ಸತ್ಯಾಗ್ರಹ ಆರಂಭಿಸಿದ ದೆಹಲಿ ಸಚಿವೆ ಅತಿಶಿ

ದೆಹಲಿ ಜೂನ್ 21: ದೆಹಲಿ ನೀರಿನ ಬಿಕ್ಕಟ್ಟಿನ ಕುರಿತು ದೆಹಲಿ ಸಚಿವೆ ಅತಿಶಿ  ಶುಕ್ರವಾರ ಮಧ್ಯಾಹ್ನ ಅನಿರ್ದಿಷ್ಟ ಉಪವಾಸವನ್ನು ಪ್ರಾರಂಭಿಸಿದ್ದಾರೆ. ಸಾಧ್ಯವಾದ ಎಲ್ಲ ಪ್ರಯತ್ನಗಳ ಹೊರತಾಗಿಯೂ, ಹರಿಯಾಣ ಸರ್ಕಾರವು ದೆಹಲಿಗೆ ಸಮರ್ಪಕವಾಗಿ ನೀರನ್ನು ನೀಡುತ್ತಿಲ್ಲ. ಅನ್ಯಾಯದ ವಿರುದ್ಧ ಹೋರಾಡಬೇಕಾದರೆ ಸತ್ಯಾಗ್ರಹದ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಎಂದು ಮಹಾತ್ಮ ಗಾಂಧಿ ಬೋಧಿಸಿದ್ದಾರೆ. ಇಂದಿನಿಂದ ‘ಜಲ ಸತ್ಯಾಗ್ರಹ’ ಆರಂಭಿಸುತ್ತೇನೆ.

ಬೆಳಗ್ಗೆ 11 ಗಂಟೆಗೆ ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಮಧ್ಯಾಹ್ನ 12ರಿಂದ ಭೋಗಲ್, ಜಂಗಪುರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸುತ್ತೇನೆ. ದೆಹಲಿಯ ಜನರು ಹರಿಯಾಣದಿಂದ ತಮ್ಮ ಸರಿಯಾದ ನೀರಿನ ಪಾಲನ್ನು ಪಡೆಯುವವರೆಗೂ ನಾನು ಉಪವಾಸ ಇರುತ್ತೇನೆ” ಎಂದು ಉಪವಾಸ ಆರಂಭಿಸುವ ಮುನ್ನ ಅತಿಶಿ ಎಕ್ಸ್ ನಲ್ಲಿ ಬರೆದಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವರಾದ ಸೌರಭ್ ಭಾರದ್ವಾಜ್, ಇಮ್ರಾನ್ ಹುಸೇನ್ ಮತ್ತು ಇತರ ಶಾಸಕರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಜಮಾಯಿಸಿದ್ದು ಅಲ್ಲಿಂದ ರಾಜ್ ಘಾಟ್ ಕಡೆಗೆ ತೆರಳಿದ್ದಾರೆ . ಸಿಎಂ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಕೂಡ ಆಮ್ ಆದ್ಮಿ ಪಕ್ಷದ ನಾಯಕರ ಜೊತೆ ರಾಜ್ ಘಾಟ್ ಗೆ ಬಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್