ಬಳ್ಳಾರಿ,ಜು.25 ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತç ಅಧ್ಯಯನ ವಿಭಾಗದ ಸಂಶೋಧನಾರ್ಥಿ ದೇವಪ್ಪ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ವಿವಿಯ ಸಮಾಜ ವಿಜ್ಞಾನ ನಿಕಾಯದ ರಾಜ್ಯಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮೋಹನ್ ದಾಸ್.ಕೆ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ವೋಟರ್ಸ್ ಬಿಹೇವಿಯರ್ ಇನ್ ಗ್ರಾಮ್ ಪಂಚಾಯತ್ ಎಲೆಕ್ಷನ್ಸ್ ವಿತ್ ಸ್ಪೆಷಲ್ ರೆಫರೆನ್ಸ್ ಟು ಬಳ್ಳಾರಿ ಡಿಸ್ಟಿçಕ್ಟ್ (2010-2020)” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್ಡಿ ಪದವಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.