LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಧರ್ಮೋ ರಕ್ಷಿತ ರಕ್ಷಿತಃ ; ಗವಿ ಸಿದ್ಧೇಶ್ವರ ಸ್ವಾಮಿ



ಬಳ್ಳಾರಿ. ಏ. 13..: ದೇವರು ಮನದಲ್ಲಿರಿಸಿಕೊಂಡು ಯಾವುದೇ ಕೆಲಸ, ದಾನ, ನಡೆ ನುಡಿಗಳನ್ನು ಶುದ್ಧ ಮನಸ್ಸಿನಿಂದ ಮಾಡಿದರೆ ಮಾತ್ರ ಜೀವನ ಸ್ವರ್ಗವಿದ್ದಂತೆರುತ್ತದೆ ಎಂದು ಶ್ರೀಕೊಪ್ಪಳ ಗವಿ ಮಠದ ಅಭಿನವ ಗವಿ ಸಿದ್ಧೇಶ್ವರ ಸ್ವಾಮಿ ಹೇಳಿದರು.

ಅವರು ತಾಲೂಕಿನ ಹಂದಿಹಾಳು ಗ್ರಾಮದ ಜಡೆಸಿದ್ಧೆಶ್ವರ ಮಠದ ಆವರಣದಲ್ಲಿ ಜಡೆಸಿದ್ಧೇಶ್ವರ ರಥೋತ್ಸವ ಹಿನ್ನೆಲೆ  ಪ್ರವಚನ ನೀಡುತ್ತಾ ಮಾತನಾಡಿ, ಧರ್ಮೋ ರಕ್ಷಿತ ರಕ್ಷಿತಹ ಎನ್ನುವಂತೆ  ಧರ್ಮದ ದಾರಿಯಲ್ಲಿ ನಡೆಯುವುದನ್ನು ಕಲಿಯಿರಿ ಅದು ನಿಮ್ಮನ್ನು ರಕ್ಷಿಸುತ್ತದೆ . ನಾನು ಎಂಬ ಅಹಂಕಾರ ಬಿಟ್ಟಲ್ಲಿ ಮಾತ್ರ ಜೀವನದಲ್ಲಿ ನೆಮ್ಮದಿ ಸುಖ ಶಾಂತಿಗಳನ್ನು ಕಾಣಲು ಸಾಧ್ಯ,. ಕಾಲ ಕೆಟ್ಟು ಹೋಗಿದೆ  ಎನ್ನುವ ಮನುಜರು ಮೊದಲು ಕೆಟ್ಟು ಹೋದ  ಅವರ ಮನಸ್ಸು, ಭಾವನೆಗಳ ದೃಷ್ಟಿಕೋನವನ್ನು ಬದಲಿಸಿಕೊಳ್ಳುವುದನ್ನು ಕಲಿಯಿರಿ ಎಂದು ಹೇಳಿದರು.

ಜೀವನದಲ್ಲಿ ಮನುಷ್ಯನಿಗೆ ದುಃಖ ಯಾಕೆ ಆಗುತ್ತದೆ ಎಂದರೆ ಇರುವುದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳದಿರುವುದೇ ಮೂಲ ಕಾರಣವಾಗಿದೆ ಎಂದರು.

ಶ್ರೀಧರಗಡ್ಡೆ ಶಾಖಾ ವಿರಕ್ತ ಮಠದ ಮರಿ ಕೊಟ್ಟೂರು ಸ್ವಾಮಿ ಮಾತನಾಡಿದರು.

ಆಂಜನೇಯ ಸ್ವಾಮಿ ದೇವಾಲಯದಿಂದ ಜಡೆಸಿದ್ಧೆಶ್ವರ ಮಠದ ವರೆಗೆ ಶ್ರೀಕೊಪ್ಪಳ ಗವಿ ಮಠದ ಅಭಿನವ ಗವಿ ಸಿದ್ಧೇಶ್ವರ ಸ್ವಾಮಿ ಹಾಗೂ ಶ್ರೀಧರಗಡ್ಡೆ ಶಾಖಾ ವಿರಕ್ತ ಮಠದ ಮರಿ ಕೊಟ್ಟೂರು ಸ್ವಾಮಿ ಅವರನ್ನು ಭಜನೆ ಮೂಲಕ ಸ್ವಾಗತಿಸಲಾಯಿತು. ಕ್ಷೇತ್ರದ ಕಂಪ್ಲಿ ಶಾಸಕ  ಜೆ ಎನ್ ಗಣೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮದ ಸಾರ್ವಜನಿಕರಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ  ಊರಿನ ಹಿರಿಯರು, ಭಕ್ತ ಸಮೋಹ, ಸುತ್ತ ಮುತ್ತಲಿನ ಗ್ರಾಮಗಳಿಂದ ಬಂದ  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್