LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಔಷಧ ಕಲಬೆರಕೆ ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಅಕ್ಟೋಬರ್ 6: ಯಾವುದೇ ಔಷಧ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆಯಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೇರಿ ಸೇರಿ ಹಲವು ರಾಜ್ಯಗಳಲ್ಲಿ ಕಫ್ ಸಿರಪ್​ ದುರಂತ ಸಂಭವಿಸಿದ ವಿಚಾರವಾಗಿ ಹಾಸನದ ಚನ್ನರಾಯಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಅವರು, ಔಷಧ ಕಲಬೆರಕೆಯಂಥ ಪ್ರಕರಣಗಳ ಮಾಹಿತಿ ವಿನಿಮಯಕ್ಕೆ ಪ್ರತ್ಯೇಕ ವೆಬ್‌ಸೈಟ್‌ ರಚಿಸುವಂತೆ ಈ ಹಿಂದೆಯೇ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಹೇಳಿದ್ದಾರೆ.





ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಫ್‌ ಸಿರಪ್​​ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿ ಕಫ್‌ ಸಿರಫ್‌ಗಳ ಟೆಸ್ಟ್‌ಗೆ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲೂ ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಸಚಿವರು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್