LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಿಕೆಶಿಗೆ ಒಲಿದು ಬಂದ ಸಿಎಂ ಪಟ್ಟ: ಧಾರವಾಡ ದಲ್ಲಿ  ವಿಜಯೋತ್ಸವ ಸಂಭ್ರಮ ಆಚರಣೆ

ಧಾರವಾಡ: ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಧಾರವಾಡದ ವಿವೇಕಾನಂದ ವೃತ್ತದಲ್ಲಿ ಡಿಕೆಶಿ ಅವರ ಭಾವಚಿತ್ರ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.  ಡಿ.ಕೆ.ಶಿವಕುಮಾರ್ ಅವರು ಒಳ್ಳೆಯ ಆಡಳಿತಗಾರರಾಗಿದ್ದು, ಅವರ ಅವಧಿಯಲ್ಲಿ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡರಾದ ರಾಬರ್ಟ್ ದದ್ದಾಪುರಿ ನೇತೃತ್ವದಲ್ಲಿ ನಡೆದ ಈ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್‌ನ ಅನೇಕ ಮುಖಂಡರು ಪಾಲ್ಗೊಂಡಿದ್ದರು.


 ಧಾರವಾಡ ನಗರದಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮ ಎಲ್ಲೆ ಮೀರಿತ್ತು ಕೆಪಿಸಿಸಿ ಅಧ್ಯಕ್ಷ ರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರರವರು ಬೆಂಗಳೂರಿನ ವಿಧಾನಸೌಧದ ಸಿಎಲ್‌ಪಿ ಲೀಡರ ಆಗಿ ಆಯ್ಕೆಯಾಗುತ್ತಿದ್ದಂತೆ ಧಾರವಾಡ ನಗರದಲ್ಲಿ ರಾಬರ್ಟ ದದ್ದಾಪುರಿ ಪ್ರಧಾನ ಕಾರ್ಯದರ್ಶಿಗಳು ಕೆಪಿಸಿಸಿ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆಯು ಮುಗಿಲು ಮುಟ್ಟಿತು. ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ರಾಬರ್ಟ ದದ್ದಾಪುರಿಯವರು ಮಾತನಾಡಿ ಡಿ.ಕೆ. ಶಿವಕುಮಾರವರು ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದರಿಂದ ಸಮಸ್ತ ಕಾರ್ಯಕರ್ತರಿಗೆ ಆತ್ಮವಿಶ್ವಾಸ ಮೂಡಿಸಿದೆ. ಕಾರ್ಯಕರ್ತರೇ ಪಕ್ಷದ ಬುನಾದಿ ಎಂದು ಹೇಳುತ್ತಿದ್ದರು. ಡಿ ಕೆ ಶಿವಕುಮಾರವರು ಮುಖ್ಯಮಂತ್ರಿ ಹುದ್ದೆಗೆ ಏರುತ್ತಿರುವುದು ಕಾರ್ಯಕರ್ತರಲ್ಲಿ ಅತೀವ ವಿಶ್ವಾಸ ಮೂಡಿದೆ ಎಂದು ಹೇಳಿದರು. ಎಲ್ಲಾ ಕಾರ್ಯಕರ್ತರನ್ನು ಶ್ರೀ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭಕ್ಕೆ ಹಾಜರಾಗಲು ಆಹ್ವಾನಿಸಿದರು.

. ಈ ಸಂಭ್ರಮಾಚರಣೆಯಲ್ಲಿ ಆನಂದ ಜಾಧವ, ಜೇಮ್ಸ್ ಯಾಮಾ, ಬಿಎಚ್. ಪೂಜಾರ, ನಾಗರಾಜ ಗುರಿಕಾರ, ಬಾಬಾ ಶೇಖ್ ಸನದಿ, ಆನಂದ ಮುಶಣ್ಣವರ, ಈಶ್ವರ ಹಿರೇಮಠ, ಗೀತಾ ಥಾಂಶಿ, ಗೌರಮ ಬಲೋಗಿ, ಸುಮಾ ಮಿನಗನವರ, ಲಕ್ಷ್ಮಿ ಗುತ್ತೆ, ಖಅಶಿಂ ಖೋಡಿಹಾಳ, ಪ್ರಕಾಶ ಹಳಿಯಾಳ, ಸುರಜ ಗೌಳಿ,ಶಾಮ್ ಮಲ್ಲನಗೌಡರ, ಮಹೇಶ ಹುಳೆಣ್ಣವರ, ಮಂಜು ಭೋವಿ, ಸುಂಕದ, ಜನಾಬ ಖಾದ್ರಿ, ಸತೀಶ ಗಿರೇಣ್ಣವರ, ಮಧುಕೇಶ್ವರ ಮಾದರ, ನಾರಾಯಣ ಮಾದರ, ಹನುಮಂತ ಮೊರಬ, ಮುಂತಾದವರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್