LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಎಸ್ಐಟಿ ತನಿಖೆ ಮೇಲೆ ಸರ್ಕಾರದ ಒತ್ತಡವಿಲ್ಲ: ಡಾ. ಜಿ. ಪರಮೇಶ್ವರ್

ಬೆಂಗಳೂರು,21: ''ಪ್ರಜ್ವಲ್​ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತಂತೆ ಎಸ್ಐಟಿ ತನಿಖೆ ಮೇಲೆ ಸರ್ಕಾರದ ಒತ್ತಡವಿಲ್ಲ. ನಿಯಮ ಏನಿದೆಯೋ ಅದರಂತೆ ಎಸ್ಐಟಿ ಕೆಲಸ ಮಾಡುತ್ತದೆ'' ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.


ಸದಾಶಿವ ನಗರ ತಮ್ಮ ನಿವಾಸದಲ್ಲಿ ಇಂದು (ಮಂಗಳವಾರ) ಮಾತನಾಡಿದ ಅವರು, ''ವಿದೇಶಾಂಗ ಇಲಾಖೆ ಪಾಸ್‌ಪೋರ್ಟ್ ರದ್ದು ಮಾಡಿದರೆ ಪ್ರಜ್ವಲ್ ವಿದೇಶದಲ್ಲಿ ಇರಲು ಆಗಲ್ಲ. ವಾಪಸ್ ಬರಲೇಬೇಕಾಗುತ್ತೆ. ಆದ್ರೆ, ನಮಗೆ ಬಹಳ ಕೆಲಸ ಇದ್ದು, ಬರ ನಿರ್ವಹಣೆ, ಆಡಳಿತದ ಜವಾಬ್ದಾರಿ ನಮ್ಮ‌ ಮೇಲಿದೆ. ಕಾಂಗ್ರೆಸ್​ಗೆ ಬೇರೆ ಕೆಲಸ ಇದೆ ಎಂದು ಹೆಚ್​ಡಿಕೆ ಯಾವ ಉದ್ದೇಶದಿಂದ ಹೇಳಿದ್ದಾರೋ ಗೊತ್ತಿಲ್ಲ'' ಎಂದು ತಿಳಿಸಿದರು.


''ಬರ ಪರಿಹಾರ ಕೊಟ್ಟಿದ್ದು, ಕೋರ್ಟ್ ಸೂಚನೆ ನಂತರ ಇನ್ನೂ ಬರ ಪರಿಹಾರ ಕೇಂದ್ರದಿಂದ ಬರಬೇಕು. ಆ ಸಹಕಾರವನ್ನು ಅವರು ಮೊದಲು ಕೊಡಲಿ. ನಮ್ಮ ಸಾಧನೆ, ಗ್ಯಾರಂಟಿ ನೋಡಿ ಬಿಜೆಪಿಗೆ ಹೊಟ್ಟೆ ಉರಿ'' ಎಂದು ಇದೇ ವೇಳೆ ಟೀಕಿಸಿದರು.


ಲೋಕಸಭೆಯಲ್ಲಿ 20 ಸ್ಥಾನ ಗೆಲ್ಲುವ ಹಗಲು ಕನಸು ಕಾಣ್ತಿದೆ ಕಾಂಗ್ರೆಸ್ ಎಂಬ ಬಿಜೆಪಿ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿ, ''ನಾವು ಹಗಲು ಕನಸು ಕಂಡ್ರೆ ಅವರೇನು ರಾತ್ರಿ ಕನಸು ಕಾಣ್ತಿದ್ದಾರಾ? ಕನಸು ಯಾವಾಗ ಕಂಡ್ರೂ ಕನಸೇ ಆಗಿದೆ. ಹಗಲಲ್ಲೂ, ರಾತ್ರಿಯಲ್ಲೂ ಕಂಡ್ರೂ ಅದು ಕನಸೇ ಆಗಿದೆ. ಸಿಎಂ ಎಷ್ಟು ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ ಅಂತ ಹೇಳಿದ್ದಾರೋ ಅಷ್ಟು ಗೆಲ್ತೇವೆ. ನಾನು ಬೇರೆ ಹೇಳುವ ಅಗತ್ಯ ಇಲ್ಲ'' ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ