LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಾ.ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಾಂಗ್ರೆಸ್ ಮುಖಂಡ ಜೊತೆಪ್ಪ ಕಪರಟ್ಟಿ ಆಗ್ರಹ


ಮಹಾಲಿಂಗಪುರ:"ಮಾಜಿ ಸಚಿವೆ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಉಮಾಶ್ರೀ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಬೇಕು ಎಂದು ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಕುರುಬ ಸಮಾಜದ ಮುಖಂಡರಾದ ಜೊತೆಪ್ಪ ಕಪರಟ್ಟಿ ಅವರು ಆಗ್ರಹಿಸಿದ್ದಾರೆ."
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, "ಡಾ.ಉಮಾಶ್ರೀ " ಅವರು ತೇರದಾಳ ಮತಕ್ಷೇತ್ರದ ಅಭಿವೃದ್ಧಿಯ ಹರಿಕಾರಿಣಿ.ತಮ್ಮ ಶಾಸಕತ್ವದ ಅವಧಿಯಲ್ಲಿ ಸುಮಾರು ಎರಡು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಅನುದಾನವನ್ನು ತರುವ ಮೂಲಕ ಕ್ಷೇತ್ರದ ಸವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದಾರೆ. ಅವರ ಈ ಅಭಿವೃದ್ಧಿಪರ ಕಾಳಜಿಯನ್ನು ಗಮನಿಸಿ, ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರು ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು,"ಎಂದು ಒತ್ತಾಯಿಸಿದ್ದಾರೆ.
*ಅಭಿವೃದ್ಧಿಯ ಹರಿಕಾರಿಣಿ: ತಮ್ಮ ಆಡಳಿತಾವಧಿಯಲ್ಲಿ ಎಲ್ಲಾ ಸಮುದಾಯಗಳಿಗೆ ಸಮಾನವಾದ ಅನುದಾನ ಹಂಚಿಕೆ ಮಾಡುವ ಮೂಲಕ ’ಸರ್ವ ಜನಾಂಗದ ಶಾಂತಿಯ ತೋಟ’ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಕಳೆದ ಐದು ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿ, ಆಡಳಿತದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕ್ಷೇತ್ರದಲ್ಲಿ ಕಣ್ಣಿಗೆ ಕಾಣುವ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನಪ್ರಿಯ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು "ಜೊತೆಪ್ಪ ಕಪರಟ್ಟಿ"ಅವರು ಶ್ಲಾಘಿಸಿದರು. 
ಎರಡು ಬಾರಿ ಶಾಸಕಿಯಾಗಿ, ಸಚಿವೆಯಾಗಿ ಮತ್ತು ಸದ್ಯ ವಿಧಾನ ಪರಿಷತ್ ಸದಸ್ಯೆಯಾಗಿ ಜನಸೇವೆ ಮಾಡುತ್ತಿರುವ ಅನುಭವಿ ರಾಜಕಾರಣಿಯಾದ ಶ್ರೀಮತಿ ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಮತ್ತು ಸಮಯೋಚಿತವಾದ ನಿರ್ಧಾರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್