LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

 

ಬಳ್ಳಾರಿ,ಮಾ.17

ಹೆರಿಗೆ ನಂತರದಲ್ಲಿ ತಾಯಂದಿರು ನವಜಾತ ಶಿಶುವಿಗೆ ಪದೇ ಪದೇ ಎದೆ ಹಾಲುಣಿಸುವ ಮೂಲಕ ಅಧಿಕ ಬಿಸಿಲಿನಿಂದ ಮಕ್ಕಳಲ್ಲಿ ಉಂಟಾಗುವ ನಿರ್ಜಲೀಕರಣವನ್ನು ತಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ತಿಳಿಸಿದ್ದಾರೆ.

ಜಿಲ್ಲೆಯ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕ ಜಾಗೃತಿ ಮೂಡಿಸಿದ ಅವರು, ಸಾಮಾನ್ಯವಾಗಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಬಳ್ಳಾರಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ೪೦ ಡಿಗ್ರಿ ಮೇಲ್ಪಟ್ಟು ದಾಖಲಾಗುತ್ತದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲ ಆಸ್ಪತ್ರೆಯ ಸಿಬ್ಬಂದಿಗೆ ಮಾಹಿತಿ ನೀಡಿ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ನವಜಾತ ಶಿಶುಗಳು ಮತ್ತು ಮಕ್ಕಳ ಹಾರೈಕೆಯಲ್ಲೂ  ತಾಯಂದಿರು ಮತ್ತು ಪಾಲಕರು ಹೆಚ್ಚಿನ ಜಾಗೃತಿ ವಹಿಸುವುದು ಅವಶ್ಯಕತೆ ಇದೆ. ವಯಸ್ಕರು, ಸಾಮಾನ್ಯ ಮನುಷ್ಯನಿಗಿಂತ ಮಕ್ಕಳಲ್ಲಿ ನಿರ್ಜಲೀಕರಣ ಪ್ರಮಾಣ ಹೆಚ್ಚುತ್ತದೆ. ಹೀಗಾಗಿ ತಾಯಂದಿರು ಮಕ್ಕಳಿಗೆ ಪದೇ ಪದೇ ಎದೆ ಹಾಲುಣಿಸಬೇಕು ಎಂದರು.

ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆರಿಗೆಯಾಗುವ ಅದರಲ್ಲೂ ಮೊದಲ ಮಗುವಿಗೆ ಜನನ ನೀಡುವ ತಾಯಿಗೆ ತನ್ನ ನವಜಾತ ಶಿಶುವಿಗೆ ಹೆರಿಗೆ ನಂತರದಲ್ಲಿ ನಿಯಮಿತವಾಗಿ ಹಾಲುಣಿಸುವ ಅಭ್ಯಾಸವು ಗೊತ್ತಿಲ್ಲದೇ ಕೆಲವು ನವಜಾತ ಶಿಶುವುಗಳಲ್ಲಿ ನಿರ್ಜಲೀಕರಣ ಕಂಡುಬರುವ ಸಾಧ್ಯತೆಗಳಿವೆ. ಅದರಲ್ಲೂ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾದಲ್ಲಿ ಇಂತಹ ಸಾಧ್ಯತೆಗಳು ಹೆಚ್ಚು. ಅಂತಹ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಚೊಚ್ಚಲು ಹೆರಿಗೆಯಾದ ಬಾಣಂತಿಯರಿಗೆ ಹೆರಿಗೆ ನಂತರದಲ್ಲಿ ಪ್ರತಿ ಒಂದರಿಂದ 2 ಗಂಟೆಯೊಳಗಡೆ ಶಿಶುವಿಗೆ ತಪ್ಪದೇ ಎದೆ ಹಾಲುಣಿಸಬೇಕು ಮತ್ತು ಎದೆ ಹಾಲಿನಲ್ಲಿ ಶೇ.70 ರಷ್ಟು ನೀರಿನ ಅಂಶವಿರುವದರಿAದ ಮಗುವಿಗೆ ಉಂಟಾಗಬಹುದಾದ ನಿರ್ಜಲೀಕರಣವನ್ನು ತಡೆಗಟ್ಟುತ್ತದೆ. 6 ತಿಂಗಳವರೆಗೆ ಮಗುವಿಗೆ ತಾಯಿಯ ಎದೆಹಾಲನ್ನು ಮಾತ್ರ ಕೊಡಬೇಕು. ಅಲ್ಲದೇ ಮಗುವಿಗೆ ಬಿಸಿಲಿನ ತಾಪಮಾನದಿಂದ ರಕ್ಷಿಸಲು ತೆಳುವಾದ ಹತ್ತಿಬಟ್ಟೆಯನ್ನು ಮಾತ್ರ ಹಾಕಬೇಕು. 2 ರಿಂದ 3 ಬಟ್ಟೆಗಳನ್ನು ಅಥವಾ ಹೊದಿಕೆಯನ್ನು ಮಕ್ಕಳಿಗೆ ಹಾಕದಂತೆ ಕಾಳಜಿ ವಹಿಸಬೇಕು ಎಂದರು.

ಇನ್ನು ಸಾರ್ವಜನಿಕರು ಕೂಡ ಬಿಸಿಲಿನಿಂದ ರಕ್ಷಣೆ ಮೊರೆ ಹೋಗಬೇಕು. ಮಧ್ಯಾಹ್ನ 01 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಆದಷ್ಟು ಮನೆಯಲ್ಲಿಯೇ ಇರಲು ಪ್ರಯತ್ನಿಸಬೇಕು. ಒಂದು ವೇಳೆ ಮನೆಯಿಂದ ಹೊರಗೆ ಬರುವ ಅಗತ್ಯವಿದ್ದರೆ ಛತ್ರಿ ಹಾಗೂ ನೀರಿನ ಬಾಟೆಲ್‌ನೊಂದಿಗೆ ಬರುವಂತೆ ಡಿಎಚ್‌ಒ ಮನವಿ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್