LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ನಾಟಕ ಕಲೆ ಸಾಹಿತ್ಯ, ಸಮಾಜದ ಜೀವನಾಡಿ"

ಬಳ್ಳಾರಿ, ಜೂ.16: ನಾಟಕ, ಕಲೆ, ಸಾಹಿತ್ಯ ಚಟುವಟಿಕೆಗಳು ಸಮಾಜದ ಜೀವನಾಡಿಯಾಗಿದ್ದು ಮನುಷ್ಯನ ಭಾವನೆಗಳನ್ನು ಅಭಿವ್ಯಕ್ತಗೊಳಿಸುವ ಸೃಜನಶೀಲ ಮಾಧ್ಯಮವಾಗಿವೆ ಎಂದು ಕರ್ನಾಟಕ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ತಿಳಿಸಿದರು. ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ರಂಗತೋರಣ ಸಾಂಸ್ಕೃತಿಕ ಸಂಘಟನೆ ಹಮ್ಮಿಕೊಂಡಿದ್ದ ಕಪ್ಪಗಲ್ಲು ನಾಟಕೋತ್ಸವದ ಎರಡನೇ ದಿನದ ನಾಟಕಕ್ಕೆ ಚಾಲನೆ ಹಾಗೂ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿ ಅವರು ಮಾತನಾಡಿದರು.
ಕಲೆ, ಸಾಹಿತ್ಯ, ರಂಗಭೂಮಿ ಚಟುವಟಿಕೆಗಳಿಂದ ಸಾಮಾಜಿಕ ಜಾಗೃತಿ ಮೂಡುತ್ತದೆ. ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಯ ಜೊತೆಗೆ ನಮ್ಮ ಮೂಲ ಸಂಸ್ಕೃತಿ, ಪರಂಪರೆ, ಸಂಪ್ರದಾಯ ಮುಂದಿನ ಪೀಳಿಗೆಗೆ ತಲುಪಿಸಲು ಸಾಧ್ಯವಾಗುತ್ತದೆ. ನೈತಿಕ ಮೌಲ್ಯಗಳನ್ನು ಬಿತ್ತಲು ರಂಗಭೂಮಿ ಚಟುವಟಿಕೆಗಳು ಹೆಚ್ಚು ಪೂರಕವಾಗಿ ಕಾರ್ಯನಿರ್ವಹಿಸುತ್ತವೆ. ಸೃಜನಶೀಲತೆಯೂ ಹೆಚ್ಚುತ್ತದೆ. ಉತ್ತಮ ನಾಟಕಗಳ ವೀಕ್ಷಣೆಯಿಂದ ಕಲ್ಪನಾಶಕ್ತಿ, ಚಿಂತನಾ ಸಾಮರ್ಥ್ಯ ವೃದ್ಧಿಸುತ್ತದೆ ಹಾಗೂ ಪರಸ್ಪರ ಸಹಬಾಳ್ವೆಯ ಮನೋಭಾವ ಬೆಳೆಯುತ್ತದೆ. ಉತ್ತಮ ವಿಚಾರ ಮತ್ತು ಸಂದೇಶಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ನೆರವಾಗುತ್ತದೆ. ಕಲೆ, ಸಾಹಿತ್ಯ ಹಾಗೂ ರಂಗಭೂಮಿ ಕೇವಲ ಮನರಂಜನಯ ಸಾಧನಗಳಲ್ಲ. ಅವು ಸಮಾಜದ ಜಾಗೃತಿ, ಸಂಸ್ಕೃತಿ ಸಂರಕ್ಷಣೆ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತವೆ ಎಂದು ತಿಳಿಸಿದರು.
ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಿ ಉನ್ನತ ಪದವಿ ಪಡೆಯುವಂತಾಗಲಿ. ಆದರೆ, ಫೇಲ್ ಆದ ವಿದ್ಯಾರ್ಥಿಗಳು ಕೊರಗುವುದು ಬೇಡ. ಪರೀಕ್ಷೆಯಲ್ಲಿ ಫೇಲಾಗುವುದು ಅಂತಿಮವಲ್ಲ. ಬದುಕಿನಲ್ಲಿ ಪಾಸ್ ಆಗುವುದು ದೊಡ್ಡ ಸಂಗತಿ. ಸೋಲು ಹೊಸದೊಂದು ಕಲಿಯುವ ಅನುಭವ ಎಂದೇ ಭಾವಿಸಬೇಕು. ಅಂಕಗಳು ಮಾತ್ರ ಭವಿಷ್ಯವನ್ನು ನಿರ್ಧರಿಸುವುದಿಲ್ಲ. ಸೋಲುಗಳು ಮತ್ತಷ್ಟೂ ಗಟ್ಟಿಯನ್ನಾಗಿಸುತ್ತವೆ. ಬದುಕಿನಲ್ಲಿ ಸಂಕಷ್ಟಗಳನ್ನು ಎದುರಿಸುವ ಸಾಮರ್ಥ್ಯವನ್ನು ರೂಪಿಸುತ್ತವೆ. ತಪ್ಪುಗಳಿಂದ ಕಲಿತು ಮತ್ತೆ ಪುಟಿದೇಳಬೇಕು ಎಂದು ಸಲಹೆ ನೀಡಿದರು.
ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷ ಪುರುಷೋತ್ತಮ ರೆಡ್ಡಿ ದಮ್ಮೂರು, ಆಹಾರ ಮತ್ತು ಸರಬರಾಜು ಇಲಾಖೆಯ ಬಿ.ಕಟ್ಟೆಗೌಡ, ನಿವೃತ್ತ ಸಹಾಯಕ ಔಷಧ ನಿಯಂತ್ರಣಾಧಿಕಾರಿ ಕೆ.ಎಸ್.ಮಲ್ಲಿಕಾರ್ಜುನ, ಗ್ರಾಮದ ಮುಖಂಡರಾದ ದೊಡ್ಡ ರಾಮಾಂಜಿನಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಂಗತೋರಣ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ಅವರು ಪ್ರಾಸ್ತಾವಿಕ ಮಾತನಾಡಿದರು. ಚಂದ್ರಶೇಖರ ಆಚಾರ್ ಕಪ್ಪಗಲ್ಲು ಹಾಗೂ ಮೆಹತಾಬ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಜೇವರ್ಗಿ ರಾಜಣ್ಣ ಅವರ ರಚನೆ-ನಿರ್ದೇಶನದ ಕುಂಟಕೋಣ ಮೂಕ ಜಾಣ ನಾಟಕ ಪ್ರದರ್ಶನಗೊಂಡಿತು. ಕಪ್ಪಗಲ್ಲು, ಸಿರಿವಾರ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ನಾಟಕ ವೀಕ್ಷಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್