LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಾಗನೂರಿ ಗ್ರಾಮಕ್ಕೆ ಶೀಘ್ರದಲ್ಲೇ ಕುಡಿಯುವ ನೀರು ಪೂರೈಕೆ

ರಾಮದುರ್ಗ: ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ತಾಲೂಕಿನ ಬಟಕುರ್ಕಿ ಗ್ರಾ.ಪಂ ವ್ಯಾಪ್ತಿಯ ನಾಗನೂರ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ ಅಲ್ಲಿನ ವಸ್ತುಸ್ಥಿತಿಯನ್ನು ಪರಿಶೀಲಿಸಿ ಪರಿಹರಿಸುವ ನಿಟ್ಟಿನಲ್ಲಿ ಮುಂದಾದರು.
ಸೂಪರಿಂಟೆಂಡಿಂಗ್ ಎಂಜಿನಿಯರ್ ಕಿರಣ್ ಘೋರ್ಪಡೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಮರ್ ನಾಯಕ್ ಎಸ್, ರಿಇತರ ಅಭಿಯಂತರರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ತಂಡ ನಾಗನೂರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಿದರು.
ಶಾಸಕ ಅಶೋಕ ಪಟ್ಟಣ ಅವರ ಸೂಚನೆಯ ಮೇರೆಗೆ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ, ನಾಗನೂರಿನಲ್ಲಿ ಶೀಘ್ರದಲ್ಲೇ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಆರಂಭವಾಗಲಿದೆ ಎಂದು ಭರವಸೆ ನೀಡಿದರು.
ಗ್ರಾಮದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿಯನ್ನು ಸಂಗ್ರಹಿಸಿ, ಅವುಗಳನ್ನು ತಕ್ಷಣವೇ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವದಾಗಿ ಹೇಳಿದರು.
ಅಲ್ಲದೇ ಗ್ರಾಮದಲ್ಲಿನ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಯಾವುದೇ ವಿಳಂಬವಾಗದಂತೆ ಕಾರ್ಯನಿರ್ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಗ್ರಾಮಸ್ಥರು ಕೂಡ ಅಧಿಕಾರಿಗಳ ಈ ಭೇಟಿ ಹಾಗೂ ಕ್ರಮಕ್ಕೆ ಸಂತೋಷ ವ್ಯಕ್ತಪಡಿಸಿದ್ದು, ನೀರಿನ ಸಮಸ್ಯೆ ಬೇಗ ನಿವಾರಣೆ ಮಾಡಿ ಸಮಸ್ಯೆಯನ್ನು ಬಗೆ ಹರಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಹಾಗೂ ಗ್ರಾಮದ ಅನೇಕ ಸಾರ್ವಜನಿಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್