LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸುಶ್ರುತ ವಿಜ್ಞಾನ ಪ್ರಯೋಗಾಲಯ ಸೇರಿ ವಿವಿಧ ಚಟುವಟಿಕೆಗಳಿಗೆ ಚಾಲನೆ


ಮಹಾಲಿಂಗಪುರದ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಸಕ ಸಿದ್ದು ಸವದಿ ಭೇಟಿ  ವಿದ್ಯಾರ್ಥಿಗಳ ಸವಾಂಗೀಣ ಅಭಿವೃದ್ಧಿಗೆ ಒತ್ತು.
ಮಹಾಲಿಂಗಪುರ,ಜು,೧೬:ನಗರದ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಸುಶ್ರುತ ವಿಜ್ಞಾನ ಪ್ರಯೋಗಾಲಯ, ಕ್ರೀಡಾ ಚಟುವಟಿಕೆಗಳು, ಸಾಂಸ್ಕೃತಿಕ ಚಟುವಟಿಕೆಗಳು, ಶಾಲಾ ಸಂಸತ್ತು ಹಾಗೂ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭವು ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ತೇರದಾಳ ಮತಕ್ಷೇತ್ರದ ಜನಪ್ರಿಯ ಶಾಸಕ ಸಿದ್ದು ಸವದಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸುಶ್ರುತ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿ, ವಿವಿಧ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಬಳಿಕ ಪ್ರಯೋಗಾಲಯವನ್ನು ವೀಕ್ಷಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, "ವಿದ್ಯಾರ್ಥಿಗಳು ಕೇವಲ ಪಠ್ಯ ಶಿಕ್ಷಣಕ್ಕೆ ಸೀಮಿತರಾಗದೆ ವಿಜ್ಞಾನ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ನಾಯಕತ್ವ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಪ್ರಯೋಗಾಲಯಗಳು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಸಹಕಾರಿಯಾಗುತ್ತವೆ" ಎಂದು ಹೇಳಿದರು.

ಇದೇ ವೇಳೆ ಶಾಲೆಯ ವತಿಯಿಂದ ಶಾಸಕ ಸಿದ್ದು ಸವದಿ ಅವರಿಗೆ ಆತ್ಮೀಯ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಶಂಕರಗೌಡ ಪಾಟೀಲ, ಶೇಖರ ಅಂಗಡಿ, ಭೀಮಶಿ ಗೌಂಡಿ, ಶಿವಾನಂದ ಅಂಗಡಿ, ವಿಜಯ ಸಬಕಾಳೆ, ಅರ್ಜುನ ಮೋಪಗಾರ, ಚನ್ನಪ್ಪ ಪಟ್ಟಣಶೆಟ್ಟಿ, ಮಹೇಶ ಜಿಡ್ಡಿಮನಿ, ತಿಪ್ಪಣ್ಣ ಬಂಡಿವಡ್ಡರ, ಸಂಜಯ ರಾಠೋಡ, ಈರಪ್ಪ ಬೀಳಗಿ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು. ಶಾಲೆಯಲ್ಲಿ ನಿರ್ಮಿಸಲಾದ ಸುಶ್ರುತ ವಿಜ್ಞಾನ ಪ್ರಯೋಗಾಲಯ ಹಾಗೂ ವಿವಿಧ ಶೈಕ್ಷಣಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
೧೫ mಟಠಿ ೦೧ ಫೋಟೋ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್