LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಎಸ್ ನಾರಾಯಣ್ ಚಿತ್ರದಲ್ಲಿ  ದುನಿಯಾ ವಿಜಯ್  ಶ್ರೇಯಸ್ ಮಂಜು

     ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಶ್  ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ. ಎಸ್ ನಾರಾಯಣ್ ಅವರ  ನಿರ್ದೇಶನದ  ಪ್ರೊಡಕ್ಷನ್ ನಂ 1 ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ.


     ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ.

ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.


     ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಎಸ್ ನಾರಾಯಣ್, ಕೆ.ಮಂಜು, ರಮೇಶ್ ಯಾದವ್ ಹಾಗೂ ದುನಿಯಾ ವಿಜಯ್ ಅವರಂತಹ ಕನ್ನಡ ಚಿತ್ರರಂಗದ ದಿಗ್ಗಜರ ಪಾಲ್ಗೊಳ್ಳುವಿಕೆಯಲ್ಲಿ ಮೂಡಿ ಬರುತ್ತಿರುವ ಈ ನೂತನ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಸದ್ಯದಲ್ಲೇ ಅದ್ದೂರಿಯಾಗಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ‌.


     ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.


     ಎಸ್ ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು  ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ.  ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ,ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ನೃತ್ಯ ನಿರ್ದೇಶನವಿರುವ 'ಪ್ರೊಡಕ್ಷನ್ ನಂ 1' ಚಿತ್ರದ ಪಿ.ಆರ್.ಓ ಆಗಿ ಸುಧೀಂದ್ರ ವೆಂಕಟೇಶ್ ಕಾರ್ಯ ನಿರ್ವಹಿಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್