LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಹಿಂದುಗಳ ಮೇಲೆ ದಾಳಿ, ಬೆದರಿಕೆ ಭಯ: ಬಾಂಗ್ಲಾದೇಶದಲ್ಲಿ ದುರ್ಗೆಯ ಪ್ರತಿಷ್ಠಾಪನೆ, ಮೆರವಣಿಗೆ ಬಂದ್​​

ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಕ್​ ಹಸೀನಾ ಅವರ ಸರ್ಕಾರ ಪತನವಾದ ಬಳಿಕ ಹಿಂದುಗಳ ಮೇಲಿನ ದಾಳಿ ಅವ್ಯಾಹತವಾಗಿ ಮುಂದುವರಿದಿದೆ. ನವರಾತ್ರಿ ಹಿನ್ನೆಲೆಯಲ್ಲಿ ನಡೆಯಬೇಕಿದ್ದ ದುರ್ಗೆಯ ಆಚರಣೆಯ ಮೇಲೂ ದಾಳಿಕೋರರ ಕರಿನೆರಳು ಬಿದ್ದಿದ್ದು, ಈ ಬಾರಿ ಕೇವಲ ಪೂಜೆ ಮಾತ್ರ ನಡೆಸಲು ಅಲ್ಲಿನ ಅಲ್ಪಸಂಖ್ಯಾತ ಹಿಂದು ಸಮುದಾಯ ತೀರ್ಮಾನಿಸಿದೆ.


ದುರ್ಗಾದೇವಿ ಮೂರ್ತಿಯ ಮೆರವಣಿಗೆ, ಸಾರ್ವಜನಿಕ ಪ್ರತಿಷ್ಠಾಪನೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ವಿರೋಧ ವ್ಯಕ್ತವಾಗಿದೆ. ಇದರ ವಿರುದ್ಧ ಪ್ರತಿಭಟನೆ ದಾಖಲಿಸಲು ಹಿಂದು ಸಮುದಾಯ ಈ ವರ್ಷ ದುರ್ಗಾ ಪೂಜೆಯನ್ನು ಸರಳವಾಗಿ ನಡೆಸಲು ನಿರ್ಧರಿಸಿದೆ.


ನಿಲ್ಲದ ಕೋಮು ದಾಳಿಗಳು: ಶೇಕ್​ ಹಸೀನಾ ಸರ್ಕಾರದ ವಿರುದ್ಧ ನಡೆದ ನಾಗರಿಕ ಬಂಡಾಯದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಯಿತು. ಆಗಸ್ಟ್​ 5ರಿಂದ ಆಗಸ್ಟ್​ 20ರ ನಡುವೆ ಅಂದರೆ 15 ದಿನಗಳಲ್ಲಿ ಹಿಂದು ಕುಟುಂಬಗಳ ಮೇಲೆ 2010 ದಾಳಿ ಘಟನೆಗಳು ದಾಖಲಾಗಿವೆ. ಇದರಲ್ಲಿ ಹಲವು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಧ್ಯಂತರ ಸರ್ಕಾರಕ್ಕೆ ದೂರು ನೀಡಲಾಗಿದೆ. ಭದ್ರತೆ ನೀಡುವ ಭರವಸೆ ಮಧ್ಯೆಯೂ ದಾಳಿ, ಬೆದರಿಕೆಗಳು ಮಾತ್ರ ನಿಂತಿಲ್ಲ ಎಂದು ಹಿಂದು ಮುಖಂಡರು ಹೇಳಿದ್ದಾರೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್