LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬ್ಯಾಂಕ್ ದರೋಡೆ ತನಿಖೆ ವೇಳೆ ನಕಲಿ ನಂಬರ್ ವಾಹನಗಳ ಹಾವಳಿ

ಮಂಗಳೂರು, ಜನವರಿ 21: ಉಳ್ಳಾಲ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಕರ್ನಾಟಕದಾದ್ಯಂತ ಭಾರೀ‌ ಸಂಚಲನ‌ ಸೃಷ್ಟಿಸಿತ್ತು. ಇದೀಗ ಮೂವರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಪೊಲೀಸರು ಚಿನ್ನಾಭರಣಗಳನ್ನೂ ವಶಪಡಿಸಿಕೊಂಡಿದ್ದಾರೆ. ಈ ನಡುವೆ, ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಸ್ಫೋಟಕ‌ ಮಾಹಿತಿ ಬಹಿರಂಗಗೊಂಡಿದೆ. ರಾಜ್ಯಾದ್ಯಂತ ಸಾವಿರಾರು ವಾಹನಗಳು ನಕಲಿ ನಂಬರ್ ಪ್ಲೇಟ್ ಅಳವಡಿಸಿ ಓಡಾಡುತ್ತಿವೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.









ಬ್ರಹ್ಮರಕೂಟ್ಲು ಟೋಲ್ ಗೇಟ್​ನಲ್ಲಿ ಬ್ಯಾಂಕ್ ದರೋಡೆಕೋರರು ಪಾಸಾಗಿದ್ದಾರೆಂಬ ಶಂಕೆಯಿಂದ ಪರಿಶೀಲಿಸಿದ್ದರೂ‌, ಅವರು ಸರ್ವಿಸ್ ರಸ್ತೆಯ ಮೂಲಕ ತೆರಳಿದ್ದಾರೆ ಎಂಬುದು ಬಳಿಕ ಗೊತ್ತಾಗಿದೆ. ಆದರೆ, ಆ ಟೋಲ್ ಗೇಟ್​ನ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಕಾರು, ಟೆಂಪೋ ಟ್ರಾವೆಲ್ಲರ್, ಲಾರಿ ಸೇರಿದಂತೆ ಹತ್ತಾರು ವಾಹನಗಳು ಫೇಕ್ ನಂಬರ್ ಪ್ಲೇಟ್ ಅಳವಡಿಸಿರುವುದು ಬೆಳಕಿಗೆ ಬಂದಿದೆ. ಅಂದರೆ ವಾಹನದಲ್ಲಿ ಇರುವ ನಂಬರೇ ಬೇರೆ, ಫಾಸ್ಟ್ ಟ್ಯಾಗ್ ರೀಡ್ ಮಾಡುವ ನಂಬರೇ ಬೇರೆ!









ಈ ರೀತಿ ನಕಲಿ ನಂಬರ್ ಪ್ಲೇಟ್ ಯಾಕಾಗಿ ಅಳವಡಿಸಿದ್ದಾರೆ ಎಂಬ ಸಂದೇಹ ಇದೀಗ ಬಲವಾಗಿದೆ. ಕೆಲವರು ಎರಡೆರಡು ವಾಹನಗಳಿಗೂ ಒಂದೇ ಫಾಸ್ಟ್ ಟ್ಯಾಗ್ ಬಳಕೆ ಮಾಡುವವರೂ ಇದ್ದಾರೆ. ಆದರೂ ಈ‌ ರೀತಿ ನಕಲಿ ನಂಬರ್ ಪ್ಲೇಟ್ ಅಳವಡಿಸಿರುವ ವಾಹನಗಳ ತಪಾಸಣೆ ನಡೆಸಲೂ ಇದೀಗ ಪೊಲೀಸ್ ಇಲಾಖೆ ಮುಂದಾಗಿದೆ.

ಯಾವ ಕಾರಣಕ್ಕಾಗಿ ವಾಹನದಲ್ಲೊಂದು, ಫಾಸ್ಟ್ ಟ್ಯಾಗ್​​ನಲ್ಲೊಂದು ವಾಹನದ ನಂಬರ್ ಅಳವಡಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಒಟ್ಟಿನಲ್ಲಿ, ಕೋಟೆಕಾರು ಬ್ಯಾಂಕ್ ದರೋಡೆಕೋರರ ತನಿಖೆಯಿಂದ ಮತ್ತೊಂದು ಅಕ್ರಮ ಬೆಳಕಿಗೆ ಬಂದಂತಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್