LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಎನ್‌ಕೌಂಟರ್‌ನಲ್ಲಿ ಹತರಾದ ಎಂಟು ಮಾವೋವಾದಿಗಳ ಗುರುತು ಪತ್ತೆ

ಹೈದರಾಬಾದ್​02: ಛತ್ತೀಸ್‌ಗಢದ ಅಬುಜಮದ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದ್ದ ಎನ್‌ಕೌಂಟರ್‌ನಲ್ಲಿ ಹತ್ತು ಮಂದಿ ಮಾವೋವಾದಿಗಳು ಹತರಾಗಿದ್ದು, ಈ ಪೈಕಿ ಎಂಟು ಜನರ ಗುರುತು ಪತ್ತೆ ಹಚ್ಚಲಾಗಿದೆ. ಅದರಲ್ಲಿ ಮೂವರು ತೆಲಂಗಾಣದವರು ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪೆದ್ದಪಲ್ಲಿ ಜಿಲ್ಲೆಯ ಪಾಲಕುರ್ತಿ ಮಂಡಲದ ಜಿಯಾರಂ ಗ್ರಾಮದ ಜೋಗಣ್ಣ ಅಲಿಯಾಸ್ ಜಿಸ್ಸು ಅಲಿಯಾಸ್ ಚೀಮ ನರ್ಸಯ್ಯ (66), ಮಂಚಿರ್ಯಾಲ ಜಿಲ್ಲೆಯ ವಿನಯ್ ಅಲಿಯಾಸ್ ಕೇಶಬೋಯಿನಾ ರವಿ (55) ಮತ್ತು ವರಂಗಲ್‌ನ ಸುಶ್ಮಿತಾ ಅಲಿಯಾಸ್ ಚೈತೆ (26) ಎಂದು ಗುರುತಿಸಲಾಗಿದೆ.


ಮೃತ ಜೋಗಣ್ಣನ ವಿರುದ್ಧ 196 ಪ್ರಕರಣಗಳಿದ್ದು, ಈತನ ಮಾಹಿತಿ ನೀಡಿದವರಿಗೆ ಸರಕಾರ 25 ಲಕ್ಷ ರೂ.ಗಳ ಬಹುಮಾನ ಘೋಷಿಸಲಾಗಿತ್ತು. ಅಲ್ಲದೇ ಮಾವೋವಾದಿ ವಿಭಾಗೀಯ ಸಮಿತಿ ಸದಸ್ಯ ರವಿ ಬಗ್ಗೆ ಮಾಹಿತ ನೀಡಿದರೆ 8 ಲಕ್ಷ ರೂ., ಮಾವೋವಾದಿ ಪಕ್ಷದ ಸದಸ್ಯೆ ತಿಕ್ಕ ಸುಶ್ಮಿತಾ ಕುರಿತು ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಸರ್ಕಾರ ಪ್ರಕಟಿಸಿತ್ತು.


ಕಳೆದ ತಿಂಗಳು 16 ರಂದು ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಅರಣ್ಯದಲ್ಲಿ ನಡೆದ ಭಾರಿ ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳು ಹತರಾಗಿದ್ದರು, ಅವರಲ್ಲಿ ಭೂಪಾಲಪಲ್ಲಿ ಜಿಲ್ಲೆಯ ಶಂಕರ್ ರಾವ್ ಮತ್ತು ಅವರ ಪತ್ನಿ ಅದಿಲಾಬಾದ್ ಜಿಲ್ಲೆಯ ದಾಸರ್ವರ್ ಸುಮನಾ ಅಲಿಯಾಸ್ ರಜಿತಾ ಹತರಾಗಿದ್ದರು. ಇತ್ತೀಚೆಗಷ್ಟೇ 15 ದಿನಗಳೊಳಗೆ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಮೂವರು ತೆಲಂಗಾಣ ಮಾವೋವಾದಿಗಳು ಹತರಾಗಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್