LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮುಸ್ಲಿಂ ಮೀಸಲಾತಿ ಕುರಿತ ಬಿಜೆಪಿಯ ಅನಿಮೇಟೆಡ್ ವಿಡಿಯೋವನ್ನು ತೆಗೆದುಹಾಕಿ: ಎಕ್ಸ್ ಗೆ ಚುನಾವಣಾ ಆಯೋಗ ಆದೇಶ

ನವದೆಹಲಿ,07: ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ಗೆ ನಿರ್ದೇಶನ ನೀಡಿದೆ.


ಈ ಸಂಬಂಧ 'X' ನ ನೋಡಲ್ ಅಧಿಕಾರಿಗೆ ಬರೆದ ಪತ್ರದಲ್ಲಿ, ಕರ್ನಾಟಕ ಬಿಜೆಪಿ ಘಟಕ ಮಾಡಿರುವ ಪೋಸ್ಟ್ ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟನ್ನು ಉಲ್ಲಂಘಿಸುತ್ತದೆ. ಆದ್ದರಿಂದ ಈ ಪೋಸ್ಟ್ ಅನ್ನು ತಕ್ಷಣ ತೆಗೆದುಹಾಕುವಂತೆ ಚುನಾವಣಾ ಆಯೋಗ, ಎಕ್ಸ್ ಗೆ ನಿರ್ದೇಶನ ನೀಡಿದೆ.

ಪತ್ರದ ಜೊತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಈಗಾಗಲೇ ದಾಖಲಾಗಿರುವ ಎಫ್ಐಆರ್ ಪ್ರತಿಯನ್ನು ಸಹ ಚುನಾವಣಾ ಆಯೋಗ ಲಗತ್ತಿಸಿದೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಈ ಸಂಬಂಧ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐಟಿ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ಪ್ರಕಾರ ಆಕ್ಷೇಪಾರ್ಹ ಪೋಸ್ಟ್ ಅನ್ನು ತೆಗೆದುಹಾಕಲು ಮೇ 5 ರಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗಳು 'ಎಕ್ಸ್' ಗೆ ನಿರ್ದೇಶನ ನೀಡಿದ್ದಾರೆ. ಆದಾಗ್ಯೂ ಆ ಪೋಸ್ಟ್ ಅನ್ನು ಇನ್ನೂ ತೆಗೆದು ಹಾಕಿಲ್ಲ. ಆ ಪೋಸ್ಟ್ ಅನ್ನು ತಕ್ಷಣವೇ ತೆಗೆದುಹಾಕಲು ನಿರ್ದೇಶಿಸಲಾಗಿದೆ" ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಕರ್ನಾಟಕದ ಉಳಿದ 14 ಲೋಕಸಭಾ ಸ್ಥಾನಗಳಲ್ಲಿ ಮತದಾನ ನಡೆಯುತ್ತಿರುವ ದಿನವೇ 'X' ಗೆ ಚುನಾವಣಾ ಆಯೋಗ ಈಗ ಹೊಸ ನಿರ್ದೇಶನ ನೀಡಿದೆ.

ಬಿಜೆಪಿಯು ಮುಸ್ಲಿಂ ಮತ್ತು ಎಸ್‌ಸಿ/ಎಸ್‌ಟಿ ಸಮುದಾಯಗಳ ನಡುವೆ ದ್ವೇಷ ಉತ್ತೇಜಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್, ಅನಿಮೇಟೆಡ್ ಕಾರ್ಟೂನ್ ವಿಡಿಯೋ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ