LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಲು ಮತದಾರರ ನೋಂದಣಾಧಿಕಾರಿ ಮೆಕ್ಕಳಕಿ ಮನವಿ

ವಿಜಯಪುರ,ಜು,೦೯ :  ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ಮತ್ತು ಅನರ್ಹ ಮತದಾರರನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಕ್ರಮ ವಹಿಸಲು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಮತದಾರರು ಸಹಕರಿಸಬೇಕು ಎಂದು ಮತದಾರರ ನೋಂದಣಾಧಿಕಾರಿಗಳು ಆಗಿರುವ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ಹೇಳಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ನಗರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ನಗರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ತಮ್ಮ ಪಕ್ಷಗಳಿಂದ ನೇಮಿಸಿಕೊಂಡ ಬಿಎಲ್ ಒ ಗಳನ್ನು ಈ ಪರಿಷ್ಕರಣೆ ಕಾರ್ಯದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ. ೩೦ ರಿಂದ ಜು. ೨೯ರವರೆಗೆ ಮತದಾರರ ಮನೆ ಮನೆಗೆ ತೆರಳಿ ಮತದಾರ ಗಣತಿ ನಮೂನೆಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಹಂತದಲ್ಲಿ ಆಯಾ ರಾಜಕೀಯ ಪಕ್ಷಗಳಿಂದ ನೇಮಿಸಿದ ಪ್ರತಿನಿಧಿಗಳು ಭಾಗವಹಿಸಬಹುದಾಗಿದೆ ಎಂದರು. 
ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ. ೩೦ರಿಂದ ಜು. ೨೯ರವರೆಗೆ ಮತದಾರರ ಮನೆ ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಣೆ ಮಾಡುತ್ತಿದ್ದು, ಸಾರ್ವಜನಿಕ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ತಮ್ಮ ಪಕ್ಷಗಳಿಂದ ನೇಮಿಸಿಕೊಂಡ ಬಿಎಲ್ ಎಗಳು ಈ ಕಾರ್ಯದಲ್ಲಿ ಭಾಗವಹಿಸುವಂತೆ  ಮನವಿ ಮಾಡಿದರು.
ಇಲ್ಲಿಯವರೆಗೆ ೧,೮೪,೦೩೪ ಮತದಾರರ ಗಣತಿ ನಮೂನೆ ವಿತರಿಸಲಾಗಿದ್ದು, ಅದರಲ್ಲಿ ೨೧,೮೧೨ ಗಣತಿ ನಮೂನೆಗಳು ಡಿಜಿಟೈಸ್ ಮಾಡಲಾಗಿರುತ್ತದೆ, ಆನಲೈನ್‌ನಲ್ಲಿ ಮತದಾರರು ಸಲ್ಲಿಸಿದ ಒಟ್ಟು ಗಣತಿ ನಮೂನೆಗಳು ೭೪೦, ಸಂಗ್ರಹಿಸಲಾಗದ/ಗೈರುಹಾಜರಾದ ಮತದಾರರು ೩, ಶಾಶ್ವತವಾಗಿ ಸ್ಥಳಾಂತರಿಗೊಂಡ ಮತದಾರರು ೮೮, ಮರಣ ಹೊಂದಿರುವ ಮತದಾರರು ೨೧೬  ಬಗ್ಗೆ ಮಾಹಿತಿ ನೀಡಲಾಯಿತು. ಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿಮಾಡಲು ಸಹಾಯಮಾಡಲು ಮತದಾರರ ಅನುಕೂಲಕ್ಕಾಗಿ ಪ್ರತಿ ವಾರ್ಡ್‌ನಲ್ಲಿ ಈಗಾಗಲೇ ಮತದಾರರ ಸಹಾಯ ಕೇಂದ್ರ ಸ್ಥಾಪಿಸಲಾಗಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಕುರಿತು ಸಾರ್ವಜನಿಕರಿಗೆ ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಧ್ವನಿ ವರ್ಧಕದ ಮೂಲಕ ಪ್ರಚಾರ ಮಾಡಲಾಗುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಮತದಾರರ ಸಹಾಯ ವಾಣಿ: ೦೮೩೫೨- ೨೦೦೨೨೫ ಸ್ಥಾಪಿಸಲಾಗಿದೆ ಎಂದರು.
ವಿಜಯಪುರ ನಗರ ಮತಕ್ಷೇತ್ರ ಸಂಬಂಧಿಸಿದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಚುನಾವಣಾ ಆಯೋಗದ ಎಲ್ಲಾ ಹಂತಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡಿರುವ ಪಾರದರ್ಶಕ ಪ್ರಕ್ರಿಯೆಯಾಗಿದೆ. ಯಾವುದೇ ಕಾರಣಕ್ಕೆ ಮತದಾರರ ಪಟ್ಟಿಯಿಂದ ನೈಜ ಮತದಾರರು ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಪಟ್ಟಿಯಲ್ಲಿ ಸೇರ್ಪಡೆಯಾಗದಂತೆ ನೋಡಿಕೊಳ್ಳಬೇಕು ಎಂದು ರಾಜಕೀಯ ಪಕ್ಷದ ಮುಖಂಡರು ಹಾಗೂ ಮತದಾರರಿಗೆ ಮನವಿ ಮಾಡಿದರು. ಸಭೆಯಲ್ಲಿ ವಿವಿಧ ಪಕ್ಷಗಳ ರಾಜಕೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್