LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸರ್ಕಾರದ ವಿರುದ್ದ ಮತ್ತೆಸಾರಿಗೆ ನೌಕರರು ಹೋರಾಟದ ಎಚ್ಚರಿಕೆ

ಬೆಂಗಳೂರು, ಮಾರ್ಚ್ 26: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿ, ನಂತರ ಸರ್ಕಾರದ ಭರವಸೆಯಿಂದ ತೃಪ್ತರಾಗಿ ಹೋರಾಟದಿಂದ ಹಿಂದೆ ಸರಿದಿದ್ದ ಸಾರಿಗೆ ನೌಕರರು ಇದೀಗ ಮತ್ತೆ ಸಿಡಿದೇಳುವ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ. ಮಾತುಕತೆಯನ್ನೂ ನಡೆಸಿಲ್ಲ ಎಂದು ಆರೋಪಿಸಿರುವ ಅವರು, ಸಿಎಂ ಮನೆ ಮುಂದೆ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.









ಮಾತುಕತೆಯ ಭರವಸೆ ನೀಡಿದ್ದ ಸಿಎಂ ಸಿದ್ದರಾಮಯ್ಯ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದರು. ಆ ಸಂದರ್ಭದಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದ‌ ಸಿಎಂ, ಮುಷ್ಕರ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. ಅಲ್ಲದೆ, ಸಂಕ್ರಾಂತಿ ನಂತ್ರ ನೌಕರರ ಸಂಘಟನೆ ಜತೆ ಮಾತುಕತೆ ನಡೆಸುವುದಾಗಿ ಹೇಳಿದ್ದರು. ನೌಕರರ ಜೊತೆ ಮಾತುಕತೆ ನಡೆಸುವುದು ಮಾತ್ರವಲ್ಲದೆ, ಪ್ರಯಾಣ ದರ ಏರಿಕೆ ಷರತ್ತನ್ನೂ ಹಾಕಲಾಗಿತ್ತು. ಅದರಂತೆ, ನಿಗಮವು ಈಗಾಗಲೇ‌ ಟಿಕೆಟ್ ದರ ಏರಿಕೆ‌ ಮಾಡಿದೆ. ಆದರೆ, ನೌಕರರನ್ನು ಮಾತ್ರ 2 ತಿಂಗಳು ಕಳೆದರೂ ಮಾತುಕತೆಗೆ ಕರೆದಿಲ್ಲ. ಇದರಿಂದಾಗಿ ಸಾರಿಗೆ ನೌಕರರ ಸಂಘಟನೆಗಳು ಸಿಎಂ ವಿರುದ್ಧ ಕೆರಳಿವೆ. ಏಪ್ರಿಲ್ 15 ರ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸುವ ಸುಳಿವು ನೀಡಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್