LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಲಿ : ನ್ಯಾ.ಮಹಾಸ್ವಾಮೀಜಿ

ಬಾಗಲಕೋಟೆ, ಜೂನ್ ೦೫: ಪರಿಸರ ನಮ್ಮ ಜೀವನದ ಆದಾರವಾಗಿದ್ದು, ಅದನ್ನು ಕಾಪಾಡುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮೀಜಿ ಹೇಳಿದರು.
ನವನಗರ ಸೆಕ್ಟರ ನಂ.೭೦ ರಲ್ಲಿರುವ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಉದ್ಯಾನವನದಲ್ಲಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಪ್ರಾದೇಶಿಕ ಹಾಗೂ ಅರಣ್ಯ ಇಲಾS, ಆದರ್ಶ ವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉದ್ಯಾನವನದಲ್ಲಿ ಗಿಡ ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಕೃತಿಯಲ್ಲಿ ನಮ್ಮ ಕಣ್ಣಿಕೆ ಕಾಣುವ ನೆಲ, ಜಲ, ಪ್ರಾಣಿ, ಪಕ್ಷಿ. ಗಿಡ, ಮರಗಳು ಪರಿಸರದ ಅಂಗಗಳಾಗಿವೆ. ಗಿಡಮರಗಳಿಂದ ನಮಗೆ ಆಮ್ಲಜನಿಕ ಲಭ್ಯವಾಗುತ್ತಿದ್ದು, ನಾವು ಪರಿಸರವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ. ಪ್ರಕೃತಿಯಲ್ಲಿ ಸಿಗುವ ಸಂಪನ್ಮೂಲಗಳನ್ನು ಮಿತವಾಗಿ ಬಳಸುವ ಮೂಲಕ ಪರಿಸರ ಸಂರಕ್ಷಿಸಿಕೊಂಡು ಮುನ್ನಡೆಯಬೇಕಿದೆ. ಇದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕಿದೆ ಎಂದರು. ನಾವು ಭವಿಷ್ಯದ ಜನಾಂಗಕ್ಕೆ ಏನಾದರೂ ಒಳ್ಳೇಯದನ್ನು ಬಿಟ್ಟು ಹೋಗಬೇಕಿದ್ದರೆ ಅದರು ಉತ್ತಮ ಪರಿಸರ ಎಂದರು. 
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರು ಮಾತನಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ೮೦ ಸಾವಿರ ಹೆಕ್ಟೇರನಷ್ಟು ಅರಣ್ಯ ಪ್ರದೇಶವಿದ್ದು, ಈ ಪೈಕಿ ಶೇ.೨೧ ರಷ್ಟು ಅರಣ್ಯವಿದೆ. ಆದರೆ ಅದು ಶೇ.೩೧ ರಷ್ಟು ಇತರಬೇಕಿತ್ತು. ಇನ್ನು ಶೇ.೧೦ ರಷ್ಟು ಪರಿಸರ ಬೆಳೆಸಬೇಕಾದರೆ ಒಂದು ಕೋಟಿ ಗಿಡಗಳನ್ನು ಬೆಳೆಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಅರಣ್ಯ ಇಲಾಖೆ ಸಹಯೋಗದೊಂದಿಗೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ತಿಳಿಸಿದರು. 
ಪ್ರಾರಂಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಮನೋಹರ ಅಹೀರೆ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ಅರಣ್ಯ ವೃದ್ದಿ ಹಾಗೂ ಜೀವ ವೈವಿದ್ಯ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕನಿಷ್ಟ ಒಂದು ಸಸಿ ನೆಟ್ಟು ಅದರ ಪೋಷಣೆ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಮನೆ ಹಾಗೂ ಶಾಲೆಗಳಲ್ಲಿ ಒಂದೊಂದು ಗಿಡ ನೆಡುವ ಸಂಕಲ್ಪ ಮಾಡಲು ಕರೆ ನೀಡಿದರು. 
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಸ್.ಗೊರವರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಗದ್ದಿ, ಬಿಟಿಡಿಎ ಮುಖ್ಯ ಅಭಿಯಂತರ ಚಂದ್ರಹಾಸ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಆದರ್ಶ ವಿದ್ಯಾಲಯದ ಮುಖ್ಯೋಪಾದ್ಯಾಯ ಬಿ.ವಿ.ಪಾಟೀಲ, ತಹಶೀಲ್ದಾರ ವಾಸುದೇವ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್