LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚನೆ:ಈಶ್ವರ ಖಂಡ್ರೆ

ಬೆಂಗಳೂರು, ಆ.5: ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಘಟ್ಟ ಪ್ರದೇಶಗಳಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ಹೇಳಿದ್ದಾರೆ.

ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಂಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಎಲ್ಲರೂ ಕಾನೂನಿನ ಮುಂದೆ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ. ಇಂಥಹ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧವೂ ಕ್ರಮ:

ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆಯ ವೇಳೆ ಅವೈಜ್ಞಾನಿಕವಾಗಿ 90ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಗೂ ನೋಟಿಸ್ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವಯನಾಡು ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಸಹಸ್ರಾರು ವರ್ಷಗಳ ಗುಡ್ಡವೇ ಕಣ್ಮರೆಯಾಗಿದೆ. ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟಗಳಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್