LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಉತ್ಪನ್ನ ಖರೀದಿ ಕೇಂದ್ರ ಆರಂಭ

ಬಳ್ಳಾರಿ,ಫೆ.05 -2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.5875 ರಂತೆ ರಾಜ್ಯ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ ಶಾಖೆ ಇವರ ಮೂಲಕ ರೈತರಿಂದ ಖರೀದಿಸಲು ನೋಂದಣಿ ಮತ್ತು ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.
*ಖರೀದಿ ಕೇಂದ್ರಗಳ ವಿವರ:*
ಬಳ್ಳಾರಿ ನಗರದ ಮಾರುತಿ ನಗರದ 2ನೇ ಕ್ರಾಸ್ ನ ಎಸ್.ಪಿ ವೃತ್ತ ಹತ್ತಿರದ ರೈತರ ಸೇವಾ ಸಹಕಾರ ಸಂಘ ನಿಯಮಿತ (ಮೊ.9535380789) ಮತ್ತು ಸಿರುಗುಪ್ಪ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-1(ಮೊ.9845166601). ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ ಮೊ.9449664453.
*ಬೇಕಾದ ಅಗತ್ಯ ದಾಖಲೆ:*
2025-26ನೇ ಸಾಲಿನ ಪಹಣಿ ಪತ್ರ, ಆಧಾರ್ ಕಾರ್ಡ್ (ಮೂಲ), ಬ್ಯಾಂಕ್ ಖಾತೆ (ಆಧಾರ್ ಕಾರ್ಡ್ಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‌ಐಡಿ ಪಡೆಯುವುದು ಕಡ್ಡಾಯ.
ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಲು ತಿಳಿಸಿದೆ.
ಕಡಲೆಕಾಳು ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ಜ.29 ರಿಂದ ರಿಂದ 80 ದಿನಗಳೊಳಗೆ ನೋಂದಣಿ ಮಾಡಿಸತಕ್ಕದ್ದು, ಹಾಗೂ ನೋಂದಣಿ ಚೀಟಿ ಪಡೆಯುವುದು. ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ಕಡಲೆ ಉತ್ಪನ್ನವನ್ನು ಮಾರಾಟಕ್ಕಾಗಿ ಖರೀದಿ ಕೇಂದ್ರಕ್ಕೆ ತರುವುದು.
ನಿಗಧಿತ ಅವಧಿಯೊಳಗೆ ನೋಂದಣಿಗೊAಡ ರೈತರಿಂದ ಪ್ರತಿ ಎಕರೆಗೆ 04 (ನಾಲ್ಕು) ಕ್ವಿಂಟಾಲ್ ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಪ್ರಮಾಣದಷ್ಟು ಕಡಲೆಕಾಳು ಉತ್ಪನ್ನವನ್ನು 90 ದಿನಗಳವರೆಗೆ ಖರೀದಿಸಲಾಗುವುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.
ಜಿಲ್ಲೆಯ ರೈತರು ಬೆಂಬಲಬೆಲೆ ಯೋಜನೆಯನ್ನು ಸದುಪಯೋಗಪಡೆದುಕೊಳ್ಳಲು ಕೋರಿದೆ. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಸದುಪಯೋಗವನ್ನು ರೈತರೇ ನೇರವಾಗಿ ಪಡೆದುಕೊಳ್ಳಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್