LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಡ ಜನರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ-ಪಾಟೀಲ



ತಾಳಿಕೋಟೆ,ಜು,೧೭ :  ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಕೂಲಿಕಾರ್ಮಿಕರು, ಸಣ್ಣ ವ್ಯಾಪಾರಸ್ಥರು, ದಿನಗೂಲಿ ನೌಕರರ ಸ್ವಸಹಾಯ ಗುಂಪುಗಳು ಹಾಗೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಈ ಯುವಸಿರಿ ಸೌಹಾರ್ದ ಸಹಕಾರಿ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಯರನಾಳ ಯುವಸಿರಿ ಸೌ.ಸ.ಸಂ.ಅಧ್ಯಕ್ಷರಾದ ಶಂಕರಗೌಡ ಪಾಟೀಲ ಹೇಳಿದರು. 
       ಗುರುವಾರ ತಾಲೂಕಿನ ಹಿರೂರು ಗ್ರಾಮದಲ್ಲಿ ಸಂಘದ ಹತ್ತನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದಲ್ಲಿ ೨೦೦೧ರಲ್ಲಿ ಆರಂಭವಾದ ಈ ಸಂಘವು ಕೇವಲ ೫ ವರ್ಷಗಳಲ್ಲಿ ೧೦ ಶಾಖೆಗಳನ್ನು ಹೊಂದಿದ್ದು, ೨೫ ಕೋಟಿ ಠೇವಣಿ, ೩೦ ಕೋಟಿ ದುಡಿಯುವ ಬಂಡವಾಳ ಹಾಗೂ ೧.೫ ಕೋಟಿ ಶೇರು ಬಂಡವಾಳ ಹೊಂದಿ ಪ್ರಗತಿ ಹಂತದಲ್ಲಿದೆ. ಸಂಘವು ವಿಶೇಷವಾಗಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಒತ್ತು ಕೊಟ್ಟು ಕೆಲಸ ಮಾಡುತ್ತಿದೆ. ಗ್ರಾಮೀಣ ಜನರ ಆರ್ಥಿಕ ಸಂಕಷ್ಟವನ್ನು ದೂರ ಮಾಡಿ ಸುಲಭವಾಗಿ ಸಾಲ ಸೌಲಭ್ಯ ಒದಗಿಸುವ ಮೂಲಕ ಅವರ ಆರ್ಥಿಕ ಸಂಕಷ್ಟಗಳಿಗೆ ಸ್ಪಂದಿಸುವ ಹಾಗೂ ದುಡಿಯುವ ಕೈಗಳಿಗೆ ಕೆಲಸ ಕೊಡುವ ದೃಷ್ಟಿಯಿಂದ ಸಂಘವು ಕೆಲಸ ಮಾಡುತ್ತಿದೆ. ಇವತ್ತು ಹಿರೂರ ಗ್ರಾಮದಲ್ಲಿ ಇದರ ಹತ್ತನೇ ಶಾಖೆಯನ್ನು ಆರಂಭಿಸಲಾಗಿದೆ ಇದಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ ಎಂದರು. 
        ಈ ಸಮಯದಲ್ಲಿ ಹಿರೂರ ಶಾಖೆಯ ಅಧ್ಯಕ್ಷ ಗುರುಪಾದಪ್ಪ ಕೊಪ್ಪದ, ಉಪಾಧ್ಯಕ್ಷ ರಾಮನಗೌಡ ದೋರನಳ್ಳಿ, ಸಲಹಾ ಸಮಿತಿ ಸದಸ್ಯರಾದ ಪ್ರಭುಗೌಡ ಚೌದ್ರಿ, ಬಸನಗೌಡ ಯರಗಲ್, ಮೌನೇಶ ಬಡಿಗೇರ, ಶಿವಯೋಗಿ ಹಿರೇಮಠ, ಚೇತನ್ ದೇಸಾಯಿ, ದೇವೇಂದ್ರ ತಳವಾರ, ಬೀರಪ್ಪ ಪೂಜಾರಿ, ಬಸಮ್ಮ ದೇ.ಕೊಪ್ಪದ, ಮಹಾದೇವಿ ನಾ.ಬಿರಾದಾರ, ವಲಯ ಅಧಿಕಾರಿ ನಾಗರಾಜ ಎಸ್.ಮದ್ದರಕಿ, ವೇದ ಮೂರ್ತಿ ಸಿ.ಎಂ. ಹಿರೇಮಠ,ತಾಳಿಕೋಟಿ ಯುವಸಿರಿ ಬ್ಯಾಂಕ್ ಅಧ್ಯಕ್ಷರಾದ ಡಾ.ವಿಜಯಲಕ್ಷ್ಮಿ ಹಿರೇಮಠ, ಉಪಾಧ್ಯಕ್ಷ ರೇಣುಕಾ ಚಿಂಚೋಳ್ಳಿ, ಗಣ್ಯರಾದ ಬಸನಗೌಡ ಪಾಟೀಲ, ಐ.ಜಿ.ಹಿರೇಮಠ,ಅಣ್ಣುಗೌಡ ಪಾಟೀಲ, ಪಿಕೆಪಿಎಸ್ ಸದಸ್ಯ ಎಸ್ ಜಿ ಚೌದ್ರಿ, ಪಿಕೆಪಿಎಸ್ ಮಾಜಿ ಅಧ್ಯಕ್ಷರಾದ ದೇವೇಂದ್ರಪ್ಪ ಬಿರಾದಾರ, ದೇವೇಂದ್ರಪ್ಪ ಕೊಪ್ಪದ, ಶಾಂತಗೌಡ ಬಿರಾದಾರ ಹಾಗೂ ಗ್ರಾಮಸ್ಥರು ಇದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ