LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರತಿಯೊಂದು ಜೀವ ಸಂಕುಲ ಪರಿಸರವನ್ನು ಅವಲಂಬಿಸಿದೆ : ಜೈವರ್ಧನ

ಹುನಗುಂದ; ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವ? ಜೂನ್ ೫ರಂದು ’ವಿಶ್ವ ಪರಿಸರ’ ದಿನವನ್ನು ಆಚರಿಸಲಾಗುತ್ತಿದೆ.ಇದು ಹಸಿರನ್ನು ಉಳಿಸಿ, ಬೆಳೆಸುವ ಮೂಲಕ ಹೆಚ್ಚು ಸಮರ್ಥನೀಯ ಭವಿ?ವನ್ನು ಸೃಷ್ಟಿಸುವ ಗುರಿ ಹೊಂದಿದೆ. ಈ ಮಹತ್ವದ ದಿನದಂದು ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಪರಿಸರ ರಕ್ಷಣೆಗೆ ಉತ್ತೇಜನ ನೀಡಲು ದೃಢವಾದ ಮತ್ತೊಂದು ಹೆಜ್ಜೆಗೆ ಸಿದ್ದರಾಗೋಣ ಎಂದು ವಲಯ ಅರಣ್ಯಾಧಿಕಾರಿ ಜೈವರ್ಧನ ತಳವಾರ ಹೇಳಿದರು. 

ಇಲ್ಲಿನ ವಲಯ ಅರಣ್ಯಾಧಿಕಾರಿಗಳ ಕಚೆರಿ ಮತ್ತು ಕಾನೂನು ಅಅರಿವು ನೆರವು ಹಾಗೂ ವಕೀಲರ ಸಂಘ ಸಹಯೋಗದಲ್ಲಿ ನಡೆಸಿದ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ಸಸಿ ನೆಟ್ಟು ನೀರುಣಿಸಿ ಅವರು ಮಾತನಾಡುತ್ತ ವನ್ಯ ಜೀವಿಗಳ ಪೋ?ಣೆಯಲ್ಲಿ ಪರಿಸರವೂ ಅತಿ ಮುಖ್ಯ ಪಾತ್ರ ವಹಿಸುತ್ತಿದೆ. ಹೀಗಾಗಿಯೇ ಈ ದಿನಕ್ಕೆ ಹೆಚ್ಚು ಪ್ರಾಮುಖ್ಯತೆ ಇರುತ್ತದೆ ಎಂಬುದನ್ನು ನಾವಿಂದು ಮನಗಾಣಬೇಕಾಗಿದೆ. ಮಾನವ ಸೇರಿದಂತೆ ಇತರ ಪ್ರಾಣಿ, ಪಕ್ಷಿಗಳೂ ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ ,ನೀರು ಮತ್ತು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಬಿಸಿದ್ದೇವೆ.ಆದರೆ ಅದರ ಜತೆಗೆ ಇತ್ತಿಚಿನ ದಿನಗಳಲ್ಲಿ ಮಾನವನು ತನ್ನ ಅನುಕೂಲತೆಗಳಿಗಾಗಿ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂಬುದನ್ನು ನಾವು ನಿತ್ಯ ನೋಡುತ್ತೇವೆ ಎಂದು ತಳವಾರ ತಿಳಿಸಿದರು. 

ನ್ಯಾಯವಾದಿ ಉಮಾ ಬಳ್ಳೋಳ್ಳಿ ಮಾತನಾಡುತ್ತ ಮಣ್ಣು, ಗಾಳಿ ,ನೀರು ಸೇರಿದಂತೆ ಎಲ್ಲವೂ ಕಲುಷಿತಗೊಂಡು ಇಡೀ ಪರಿಸರವೇ ಹಾಳಾಗುತ್ತದೆ. ಇದರಿಂದಾಗಿಯೇ ಹವಾಮಾನ ವೈಪರಿತ್ಯ, ಆರೋಗ್ಯ ಸಮಸ್ಯೆಗಳು ಹೆಚ್ಚಿ ಜನಜೀವನ ದುಸ್ತರವಾಗಿ ಮನು ಕುಲದ ಸರ್ವನಾಶಕ್ಕೆ ನಾವೇ ಕಾರಣರಾಗಿದ್ದೇವೆ. ಹೀಗಾಗಿ ಪರಿಸರ ಉಳಿಸುವಂತೆ ಜನರಿಗೆ ತಿಳಿಸಿ ಹೇಳುವುದರ ಮೂಲಕ ಅದರ ಉಳಿವಿಗೂ ಸಂಕಲ್ಪ ಮಾಡುವುದು ಇಂದಿನ ಕರ್ತವ್ಯವಾಗಿದೆ. ಆ ದಿಸೆಯಲ್ಲಿ ನಾವೆಲ್ಲರೂ ಕಾಡು ಬೆಳೆಸಿ ನಾಡು ಉಳಿಸಲು ಮುಂದೆ ಸಾಗೋಣ ಎಂದರು. ಉಪ ವಲಯ ಅರಣ್ಯಾಧಿಕಾರ ಎಸ್.ಎನ್. ಕಂಬಿಮಠ, ವಿಜಯಕುಮಾರ ನಾಯಕ, ಜಗಧೀಶ ಚಿಂಚೋಳ್ಳಿ, ಗಿರೀಶ ಮೆಕ್ಕೇದ, ಅರಣ್ಯ ವೀಕ್ಷಕ ಯಲ್ಲಪ್ಪ ಅಂಬಿಗೇರ ಮತ್ತು ಸಿಬ್ಬಂದಿ, ಶ್ರೀಮತಿ ದೀಪಾ, ದೇವರಾಜ ಅರಸು ವಸತಿ ನಿಲಯದ ವಿಧ್ಯಾರ್ಥಿನಿಯರು ಇದ್ದರು.

೫;ಎಚ್‌ಎನ್‌ಡಿ;೧; ಹುನಗುಂದ ವಲಯ ಅರಣ್ಯ ಇಲಾಖೆ ಮತ್ತು ಕಾನೂನು ಅರಿವುನೆರವು ಮತ್ತು ವಕೀಲರ ಸಂಘದ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ಜೈವರ್ಧನ ತಳವಾರ ಸಸಿ ನೆಟ್ಟು ನೀರುಣಿಸಿದರು.  

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್