LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕಾರ

ಮಂಡ್ಯ, ಅಕ್ಟೋಬರ್ 18: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬರುತ್ತಿದೆ. ಕಾಲೋನಿಯ 7 ಕುಟುಂಬಗಳು ಬಹಿಷ್ಕಾರಕ್ಕೆ ಒಳಗಾಗಿದ್ದು, ಕುಟುಂಬಗಳ ಜೊತೆ ನೆರೆ ಹೊರೆಯವರು ಮಾತನಾಡದಂತೆ ಕುಲದ ಮುಖಂಡರು ಆದೇಶ ಮಾಡಿದ್ದಾರೆ. ಇದೀಗ ಬಹಿಷ್ಕಾರಕ್ಕೊಳಗಾದ ಕುಟುಂಬಗಳು ಕಾನೂನು ಹೋರಾಟ ನಡೆಸಲು ಮುಂದಾಗಿದ್ದಾರೆ.

ಕಾಲೋನಿಯ ದಲಿತ ಸಮುದಾಯದವರು ಹಬ್ಬವನ್ನು ಆಚರಿಸಲು ಕಾಲೋನಿಯಲ್ಲಿ ಹಣ ಕೇಳಲಾಗುತ್ತಿತ್ತು. ಈ ಸಂದರ್ಭದಲ್ಲಿ 7 ಕುಟುಂಬದ ಸದಸ್ಯರು ಕುಲದ ವಿರುದ್ಧ ಮಾತನಾಡಿದ್ದರು. ಅಷ್ಟೇ ಅಲ್ಲದೇ ಹಬ್ಬಕ್ಕೆ ಹಣ ನೀಡುವುದಿಲ್ಲವೆಂದೂ ಹೇಳಿದ್ದರು. ಇದೇ ಕಾರಣಕ್ಕೆ ದಲಿತ ಸಮುದಾಯ ಪಂಚಾಯಿತಿಯ ಯಜಮಾನರು ಈ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರವೊಡ್ಡಿದ್ದಾರೆ.

ಬಹಿಷ್ಕಾರಕ್ಕೊಳಗಾದ ಕುಟುಂಬಗಳ ಜೊತೆ ನೆರೆ ಹೊರೆಯವರು ಮಾತನಾಡದಂತೆ ಆದೇಶ ಮಾಡಲಾಗಿದೆ. ಅವರನ್ನು ಕುಲದ ಯಾವುದೇ ಕಾರ್ಯಕ್ರಮಗಳಿಗೂ ಕರೆಯಬಾರದೆಂದೂ, ಕರೆದರೂ ಆ ಕುಟುಂಬಗಳು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದೆಂದೂ ಕಟ್ಟಾಜ್ಞೆ ಮಾಡಿದ್ದಾರೆ. ಬಹಿಷ್ಕೃತ ಕುಟುಂಬಗಳೊಂದಿಗೆ ಯಾವುದೇ ವ್ಯಾಪಾರ, ವ್ಯವಹಾರ ನಡೆಸದಂತೆ ಸೂಚಿಸಲಾಗಿದೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್