LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಿಜಿಟಲ್ ಸೇವೆಗಳ ವಿಸ್ತರಣೆ, ಓದುಗರ ಸಂಖ್ಯೆ ಹೆಚ್ಚಿಸಲು ಕ್ರಮ : ಡಿಸಿ

ಬಾಗಲಕೋಟೆ, ಜುಲೈ ೦೮: ಗ್ರಂಥಾಲಯಗಳ ಅಭಿವೃದ್ದಿ, ಡಿಜಿಟಲ್ ಸೇವೆಗಳ ವಿಸ್ತರಣೆ ಹಾಗೂ ಓದುಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲೇ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ರಂಥಾಲಯಗಳು ಕೇವಲ ಪುಸ್ತಕ ಓದುವ ಕೇಂದ್ರಗಳಾಗಿರದೇ ಜ್ಞಾನ ಮತ್ತು ಮಾಹಿತಿಯ ಪ್ರಮುಖ ಕೇಂದ್ರಗಳಾಗಿವೆ. ಆದ್ದರಿಂದ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯ, ಉತ್ತಮ ಪುಸ್ತಕಗಳ ಲಭ್ಯತೆ ಹಾಗೂ ಡಿಜಿಟಲ್ ಸೇವೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಸೂಚಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯಗಳನ್ನು ಬಳಸುವಂತೆ ಹಾಗೂ ಮಕ್ಕಳಲ್ಲಿ ಓದುವ ಅಭಿರುಚಿ ಬೆಳೆಸಲು ವಿಶೇಷ ಕಾರ್ಯಕ್ರಮಗಳು, ಪುಸ್ತಕ ಪ್ರದರ್ಶನ, ಓದು ಅಭಿಯಾನ ಹಾಗೂ ವಿವಿಧ ಸಾಹಿತ್ಯಿಕ ಚಟುವಟಿಕೆಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಹಾಗೂ ತಾಲೂಕಾ ಮಟ್ಟದಲ್ಲಿರುವ ಗ್ರಂಥಾಲಯಗಳು ದಿನದ ೨೪ ಗಂಟೆಗಳ ಕಾಲ ಸೇವೆ ನೀಡುವಂತೆ ಆಗಬೇಕು. ಸಾಹಿತ್ಯದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವ ಪುಸ್ತಕಗಳನ್ನು ಖರೀದಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
  ಜಿಲ್ಲಾ ಕೇಂದ್ರ ಗ್ರಂಥಾಲಯದ ಆಡಳಿತಾತ್ಮಕ ವಿಷಯಗಳು, ಬಜೆಟ್ ವೆಚ್ಚ, ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಿ ಅಗತ್ಯ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ವ್ಯಾಪ್ತಿಯ ವಸತಿ ನಿಲಯಗಳಲ್ಲಿರುವ ಗ್ರಂಥಾಲಯ ಹಾಗೂ ಪ್ರೌಢಶಾಲಾ ಹಾಗೂ ಕಾಲೇಜುಗಳ ಗ್ರಂಥಾಲಯಕ್ಕೆ ಅಗತ್ಯವಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳ ಬೇಡಿಕೆಯ ಪಟ್ಟಿಯನ್ನು ಸಲ್ಲಿಸಲು ತಿಳಿಸಿದರು. ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ ಇರುವ ಗ್ರಂಥಾಲಗಳ ದುರಸ್ಥಿಗೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಯಿತು.
ಬಾಗಲಕೋಟೆಯ ಹಳೆ ಕೋರ್ಟ ಆವರಣದಲ್ಲಿರುವ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವದರಿಂದ ಹೆಚ್ಚುವರಿ ಕೊಠಡಿ ನಿರ್ಮಿಸಿಕೊಳ್ಳಲು ಅನುಮತಿ ನೀಡಲು ಕೋರಲಾಯಿತು. ಮುಧೋಳ ಕವಿ ಚಕ್ರವರ್ತಿ ರನ್ನ ಗ್ರಂಥಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ, ಸಿಸಿಟಿವಿ ಅಳವಡಿಕೆ ಸೇರಿದಂತೆ ಇತರೆ ಬೇಡಿಕೆಗಳನ್ನು ಸಭೆ ಮುಂದಿಡಲಾಯಿತು.
ಸಭೆಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಜೀತ ಮನ್ನಿಕೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಹಾಜರಾನ್ ಸರಿನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್