LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರೈತ ಫಕೀರಪ್ಪಗೆ ಅವಮಾನ ಮಾಡಿದ್ದ ಮಾಲ್​​ನಿಂದಲೇ ಸನ್ಮಾನ

ಬೆಂಗಳೂರು, ಜುಲೈ.17: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್​ಗೆ (GT Mall) ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದ ಫಕೀರಪ್ಪ ಎಂಬ ವೃದ್ಧ ಪಂಚೆ ಧರಿಸಿದ್ದ ಎಂಬ ಕಾರಣಕ್ಕೆ ಮಾಲ್ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದರು. ಸದ್ಯ ಈಗ ರೈತ ಫಕೀರಪ್ಪಗೆ ಅವಮಾನ ಮಾಡಿದ್ದ ಮಾಲ್​​ನಿಂದಲೇ ಸನ್ಮಾನ ಮಾಡಲಾಗಿದೆ. ರೈತ ಫಕೀರಪ್ಪಗೆ ಶಾಲು ಹಾಕಿ ಸನ್ಮಾನಿಸಲಾಗಿದೆ. ಮಾಲ್​ ಇನ್​​ಚಾರ್ಜ್ ಸುರೇಶ್​​​ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.

ರೈತ ಫಕೀರಪ್ಪ ಪಂಚೆ ಧರಿಸಿ ಮಾಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರೈತನನ್ನು ಅವಮಾನಿಸಿದಕ್ಕೆ ಕನ್ನಡಪರ ಹೋರಾಟಗಾರರು ಮಾಲ್ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾಲ್ ಇನ್ಚಾರ್ಜ್ ಸುರೇಶ್ ಕ್ಷಮೆ ಕೇಳಿದರೂ ಹೋರಾಟಗಾರರು ಜಗ್ಗಲಿಲ್ಲ. ಮ್ಯಾನೇಜರ್ ಬರಬೇಕು ಎಂದು ಪಟ್ಟು ಹಿಡಿದಿದ್ದರು. ಸದ್ಯ ಈಗ ಮಾಲ್​ ಸಿಬ್ಬಂದಿ ತಾವು ಮಾಡಿದ ಎಡವಟ್ಟನ್ನು ಸರಿ ಮಾಡಿಕೊಂಡಿದ್ದು ಪಂಚೆಯಲ್ಲೇ ಬಂದ ರೈತ ಫಕೀರಪ್ಪನಿಗೆ ಮಾಲ್ ಒಳಗೆ ಸನ್ಮಾನ ಮಾಡಿ ಕ್ಷಮೆ ಕೇಳಿದೆ.

ಇನ್ನು ಈ ಘಟನೆ ಸಂಬಂಧ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಮುಖ ನೋಡಿ, ಬಟ್ಟೆ ನೋಡಿ ಒಬ್ಬ ವ್ಯಕ್ತಿಯನ್ನು ಅಳೆಯಬಾರದು. ಇದೊಂದು ಬ್ರಿಟಿಷರ‌ ಮನಸ್ಥಿತಿ, ನಮ್ಮನ್ನು ಆಳಿದವರ ಮೈಂಡ್​ಸೆಟ್. ಜಿ.ಟಿ.ಮಾಲ್​ ಅಷ್ಟೇ ಅಲ್ಲ, ಬೇರೆ ಕಡೆಯೂ ಇಂತಹ ರೀತಿ ನಡೆದಿವೆ. ಅರಿವಿನ ಕೊರತೆ ಇದೆಯೋ, ದುರಹಂಕಾರದಿಂದ ಮಾಡುತ್ತಿದ್ದಾರೋ? ಜಿ.ಟಿ.ಮಾಲ್​ನವರು ಹಾಗೇ ನಡೆದುಕೊಂಡಿದ್ದು ತಪ್ಪು, ಖಂಡನೀಯ. ಮುಖ ನೋಡಿ ಗೌರವ ಕೊಡುವುದು ಖಂಡನೀಯ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್