LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಇಂದು ಪಂಜಾಬ್​ ಬಂದ್​ಗೆ ಕರೆಕೊಟ್ಟ ರೈತಪಡೆ; ಇತರ ಸೌಕರ್ಯಗಳು ಸ್ಥಗಿತ!

ಚಂಡೀಗಢ ಪಂಜಾಬ್​​: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಜಾಬ್​ ಮತ್ತು ಹರಿಯಾಣ ರೈತರು ಶಂಭು ಮತ್ತು ಕನೌರಿ ಗಡಿ ಬಳಿ ನಿರಂತರ ಪ್ರತಿಭಟನೆ ಮುಂದುವರೆಸಿದ್ದಾರೆ. ಈ ನಡುವೆ ರೈತರು ನಡೆಸಿದ್ದ ದೆಹಲಿ ನಡಿಗೆ ಹಲವು ಬಾರಿ ವಿಫಲವಾಗಿದ್ದು, ಗಡಿಯಲ್ಲಿಯೇ ಅವರನ್ನು ತಡೆಯಲಾಗುತ್ತಿದೆ. ಮತ್ತೊಂದೆಡೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ನಾಯಕ ಜಗ್ಜೀತ್​​ ಸಿಂಗ್​ ಕಳೆದ 34 ದಿನಗಳಿಂದ ಅಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಹಿನ್ನೆಲೆ ಮಧ್ಯ ಪ್ರವೇಶಿಸಿರುವ ಸುಪ್ರೀಂ ಕೋರ್ಟ್​​ ಪಂಜಾಬ್​ ಮತ್ತು ಕೇಂದ್ರ ಸರ್ಕಾರಗಳು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದೆ.


ಈ ನಡುವೆ ರೈತರು ಇಂದು ಪಂಜಾಬ್​ ಬಂದ್​ಗೆ ಕರೆ ನೀಡಿದ್ದಾರೆ. ತುರ್ತು ಸೇವೆ ಹೊರತುಪಡಿಸಿ ಸಂಪೂರ್ಣ ಬಂದ್​ ನಡೆಸುವುದಾಗಿ ಅವರು ಘೋಷಿಸಿದ್ದಾರೆ. ಇದಾದ ಬಳಿಕ ಹರಿಯಾಣದಲ್ಲಿ ಜನವರಿ 4 ರಂದು ಮತ್ತು ಜನವರಿ 9 ರಂದು ಮೊಗಾದಲ್ಲಿ ಮಹಾಪಂಚಾಯತ್​ ಸಂಘಟಿಸಲಾಗುವುದು ಎಂದು ರೈತರು ಘೋಷಿಸಿದ್ದಾರೆ.


ಡಿಸೆಂಬರ್​ 30ರಂದು ಕರೆ ನೀಡಿರುವ ಪಂಜಾಬ್​ ಬಂದ್​ ರಸ್ತೆ ಟ್ರಾಫಿಕ್​ ಜೊತೆಗೆ ಉದ್ಯಮದ ಮೇಲೂ ಪರಿಣಾಮ ಬೀರಲಿದೆ. ಇದೇ ವೇಳೆ ಪಂಜಾಬ್​​ ಉದ್ಯಮಿಗಳು ಮಾರುಕಟ್ಟೆ ತೆರೆಯುವುದಾಗಿ ಘೋಷಿಸಿದ್ದಾರೆ. ಈ ಕುರಿತು ಮಾತನಾಡಿರುವ ಪಂಜಾಬ್​ ಉದ್ಯಮ ಮಂಡಳಿಯ ರಾಜ್ಯ ನಾಯಕ ಅನಿಲ್​ ಬನ್ಸಾಲ್​ ನಾನಾ, ರೈತ ಸಂಘಟನೆ ಬಂದ್​ ಕುರಿತಾಗಿ ನಮ್ಮ ಜೊತೆ ಯಾವುದೇ ಸಂಪರ್ಕ ನಡೆಸಿಲ್ಲ. ಜೊತೆಗೆ ಬಂದ್​ನಿಂದ ಉದ್ಯಮಿ - ವ್ಯಾಪಾರಿಗಳಿಗೆ ತೊಂದರೆಯಾಗಲಿದೆ. ಈಗಾಗಲೇ ಉದ್ಯಮವೂ ಕೆಟ್ಟ ಸ್ಥಿತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ನಾವು ಪಂಜಾಬ್​ ಬಂದ್​​ಗೆ ಬೆಂಬಲ ನೀಡುವುದಿಲ್ಲ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್