LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಚನ ಸಾಹಿತ್ಯದ ಉಳಿವಿಗೆ ಫ.ಗು.ಹಳಕಟ್ಟಿ ಕೊಡುಗೆ ಅನನ್ಯ

ಹಸಿರು ಕ್ರಾಂತಿ ವರದಿ ಚನ್ನಮ್ಮನ ಕಿತ್ತೂರು
ಶರಣರ ವಚನ ಸಾಹಿತ್ಯದ ಉಳಿವಿಗೆ ಫ.ಗು.ಹಳಕಟ್ಟಿಯವರ ಕೊಡುಗೆ ಅನನ್ಯವಾಗಿದ್ದು, ಅವರನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹಿರೇನಂದಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಪಕ ಬಿ.ಸಿ.ಬಿದರಿ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಮತ್ತು ರಾಜಗುರು ಸಂಸ್ಥಾನ ಕಲ್ಮಠ ಸಂಯುಕ್ತಾಶ್ರಯದಲ್ಲಿ ವಚನ ಪಿತಾಮಹ ಫ.ಗು.ಹಳಕಟ್ಟಿಯವರ ಜೀವನ ಮತ್ತು ಕೊಡುಗೆ ಕುರಿತು ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶರಣರ ಜೀವನ ಮೌಲ್ಯಗಳನ್ನು ಕಾಲಾತೀತವಾದ ಕಾಲ ಗರ್ಭದಲ್ಲಿ ಹುದುಗಿ ಹೋಗಿದ್ದ ವಚನ ಸಾಹಿತ್ಯ ಎಂಬ ಅನರ್ಘ್ಯ ರತ್ನವನ್ನು ಶೋಧಿಸಿ, ಅನ್ವೇಷಿಸಿ, ಸಂಗ್ರಹಿಸಿ ಸಂಶೋಧನಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದವರಲ್ಲಿ ಜೀವನದುದ್ದಕ್ಕೂ ಕಡು ಬಡತನ ಮತ್ತು ಕಹಿ ಅನುಭವಗಳನ್ನೇ ಕಂಡ ವಚನ ಪಿತಾಮಹ ಫ.ಗು.ಹಳಕಟ್ಟಿಯವರು ಮೊದಲಿಗರಾಗಿದ್ದಾರೆ ಎಂದು ವಿವರಿಸಿದರು.

ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಎಸ್.ಬಿ.ದಳವಾಯಿ ಮಾತನಾಡಿ, ವಕೀಲಿ ವೃತ್ತಿಯಲ್ಲಿರುವಾಗಲೇ ಫ.ಗು.ಹಳಕಟ್ಟಿಯವರು ಸಾಹಿತ್ಯ ರಚನೆಯಲ್ಲಿ ಆಸಕ್ತಿ ವಹಿಸಿ ಶರಣರ ವಚನಗಳನ್ನು ಸಂಗ್ರಹಿಸಿ ಅವುಗಳನ್ನು ಪ್ರಕಟಿಸಲು ತಮ್ಮ ಸ್ವಂತ ಮನೆಯನ್ನೇ ಮಾರಿ ಒಂದು ಹಿತ ಚಿಂತಕ ಮುದ್ರಣಾಲಯ ಸ್ಥಾಪಿಸಿ ಈ ಮೂಲಕ 250ಕ್ಕೂ ಹೆಚ್ಚು ವಚನಕಾರರನ್ನು ಬೆಳಕಿಗೆ ತರುವುದರ ಜೊತೆಗೆ 175 ವಚನ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಲ್ಲಿ ಯಶಸ್ವಿಯಾಗಿರುವುದು ಅಭಿಮಾನದ ವಿಷಯವಾಗಿದೆ ಎಂದು ಸಮಾರೋಪ ನುಡಿಗಳಲ್ಲಿ ಹಳಕಟ್ಟಿಯವರ ತ್ಯಾಗ ಮತ್ತು ಸಾಹಿತ್ಯ ಸೇವೆ ಯುವ ಜನತೆಗೆ ಪ್ರೇರಣೆ ಆಗಲಿ ಎಂದು ಆಶಿಸಿದರು.

ಈಶ್ವರ ಗಡಿಬಿಡಿ ಮತ್ತು ಭುವನಾ ಹಿರೇಮಠರವರ ವಚನ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಅವರ ವಚನ ಸಾಹಿತ್ಯದ ಕೊಡುಗೆ ಸ್ಮರಿಸಲಾಯಿತು.  ಬಸವರಾಜ ದಳವಾಯಿ ಸ್ವಾಗತಿಸಿದರು. ಮಹೇಶ್ವರ ಹೊಂಗಲ ವಂದಿಸಿದರು. ಮಂಜುನಾಥ ಕಳಸಣ್ಣವರ ನಿರೂಪಿಸಿದರು.

ಎಸ್.ಬಿ.ಎಂ.ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಮಹೇಶ ಚನ್ನಂಗಿ, ಮೆಹಬೂಬ್‌ ಮುಲ್ತಾನಿ,  ಬಿ.ಎಸ್.ಆಸಂಗಿಮಠ, ಗ್ರಂಥಪಾಲಕ ಸಂಗಮೇಶ, ಚಂದ್ರಶೇಖರ ಚನ್ನಂಗಿ ಮತ್ತು ಇತರರು ಉಪಸ್ಥಿತರಿದ್ದರು.

ಶರಣರ ಜೀವನ ಮೌಲ್ಯಗಳನ್ನು ಕಾಲಾತೀತವಾದ ಕಾಲ ಗರ್ಭದಲ್ಲಿ ಹುದುಗಿ ಹೋಗಿದ್ದ ವಚನ ಸಾಹಿತ್ಯ ಎಂಬ ಅನರ್ಘ್ಯ ರತ್ನವನ್ನು ಶೋಧಿಸಿ, ಅನ್ವೇಷಿಸಿ, ಸಂಗ್ರಹಿಸಿ ಸಂಶೋಧನಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದವರಲ್ಲಿ ಜೀವನದುದ್ದಕ್ಕೂ ಕಡು ಬಡತನ ಮತ್ತು ಕಹಿ ಅನುಭವಗಳನ್ನೇ ಕಂಡ ವಚನ ಪಿತಾಮಹ ಫ.ಗು.ಹಳಕಟ್ಟಿಯವರು ಮೊದಲಿಗರಾಗಿದ್ದಾರೆ.
-ಬಿ.ಸಿ.ಬಿದರಿ, ಮುಖ್ಯೋಪಾಧ್ಯಾಯರು, ಸರ್ಕಾರಿ ಪ್ರೌಢಶಾಲೆ ಹಿರೇನಂದಿಹಳ್ಳಿ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್