LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸ್ವಪ್ನಮಂಟಪ ಚಿತ್ರೀಕರಣ ಮುಕ್ತಾಯ

     ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.


     'ಸ್ವಪ್ನಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.


     'ಸ್ವಪ್ನಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.


     ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜೊತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.


     ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶಕರಾಗಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್