LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ

ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರದ ಅತಿ ಪ್ರಮುಖ ಆಧಾರ ಸ್ತಂಭಗಳಾಗಿರುವ ತೆಲುಗು ದೇಶಂ ಪಕ್ಷ ಮತ್ತು ಜನತಾ ದಳ ಸಂಯುಕ್ತ  ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.

ಮಂಗಳವಾರ ಸಂಸತ್‌ನಲ್ಲಿ ತಮ್ಮ ಸತತ ಏಳನೇ ಬಜೆಟ್ ಮಂಡಿಸಿದ ಅವರು, ಬಿಜೆಪಿ ಮಿತ್ರ ಪಕ್ಷಗಳ ಬೇಡಿಕೆಗಳನ್ನು ತಣಿಸುವ ಮೂಲಕ ಅವುಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಜೆಡಿಯ ನಾಯಕ ನಿತೀಶ್ ಕುಮಾರ್ ಆಡಳಿತವಿರುವ ಬಿಹಾರ ಸರ್ಕಾರದ ಬೇಡಿಕೆಯಾದ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕುಗಳಿಂದ ಬಾಹ್ಯ ನೆರವನ್ನು ಈಡೇರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.

ಬಿಹಾರಕ್ಕೆ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಸೌಲಭ್ಯಗಳು ಮತ್ತು ಕ್ರೀಡಾ ಸೌಕರ್ಯಗಳನ್ನು ಒದಗಿಸಲಾಗುವುದು. ರಾಜ್ಯದ ಹೆದ್ದಾರಿಗಳ ಅಭಿವೃದ್ಧಿಗಾಗಿ ಹೆಚ್ಚುವರಿಯಾಗಿ 26 ಸಾವಿರ ಕೋಟಿ ರೂ ಹಂಚಿಕೆ ಮಾಡಲಾಗುವುದು.

ಆಂಧ್ರಪ್ರದೇಶಕ್ಕೆ ವಿಶೇಷ ಆರ್ಥಿಕ ನೆರವನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ, ವಿಶೇಷ ರಾಜ್ಯ ಸ್ಥಾನಮಾನಕ್ಕೆ ಬೇಡಿಕೆ ಇರಿಸಿತ್ತು. ಆದರೆ ಅದನ್ನು ಈಡೇರಿಸದೆ ಇದ್ದರೂ, ಅದಕ್ಕೆ ಪೂರಕವಾದ ಆರ್ಥಿಕ ನೆರವು ಪ್ರಕಟಿಸಲಾಗಿದೆ.

ಆಂಧ್ರಪ್ರದೇಶದ ಮರು ಸಂಘಟನಾ ಕಾಯ್ದೆಯ ಭರವಸೆಗಳನ್ನು ಈಡೇರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ಹೊಸ ರಾಜಧಾನಿಯ ನಿರ್ಮಾಣಕ್ಕಾಗಿ ಕಾಯ್ದೆ ಅಡಿ 15 ಸಾವಿರ ಕೋಟಿ ರೂ ಅನುದಾನವನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಬಿಡುಗಡೆ ಮಾಡಲಾಗುವುದು. ಮುಂಬರುವ ವರ್ಷಗಳಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಬಹುಪಕ್ಷೀಯ ಸಂಸ್ಥೆಗಳ ಮೂಲಕ ವಿಶೇಷ ಆರ್ಥಿಕ ಬೆಂಬಲ ಒದಗಿಸಲಾಗುವುದು ಎಂದು ನಿರ್ಮಲಾ ತಿಳಿಸಿದರು.

ಪೊಲ್ಲಾವರಂ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಲು ಹಾಗೂ ಆರ್ಥಿಕ ನೆರವು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್