LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸೋಶಿಯಲ್‌ ಮೀಡಿಯಾ ಮೂಲಕ ಪಾಕ್‌ ಉಗ್ರರೊಂದಿಗೆ ನಂಟು; ದೆಹಲಿಯಲ್ಲಿ ಐವರ ಬಂಧನ

ನವದೆಹಲಿ: ದೆಹಲಿ ಪೊಲೀಸ್​​​​​​ ವಿಶೇಷ ಘಟಕವು​​​ ಸಾಮಾಜಿಕ ಜಾಲತಾಣದ ಮೂಲಕ​ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐವರನ್ನು ಬಂಧಿಸಿದೆ. ಆರೋಪಿಗಳಿಂದ ಸುಧಾರಿತ ಕಚ್ಛಾ ಸ್ಫೋಟಕ(ಐಇಡಿ)ಗಳನ್ನು ತಯಾರಿಸಲು ಬಳಸುವ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂಲಗಳ ಪ್ರಕಾರ, ಆರೋಪಿಗಳು ಪಾಕಿಸ್ತಾನದ ಉಗ್ರ ಸಂಘಟನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಸಂಪರ್ಕದಲ್ಲಿದ್ದರು. ಈ ಎಲ್ಲಾ ಖಾತೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.


ತನಿಖಾಧಿಕಾರಿಗಳ ಪ್ರಕಾರ, ಈ ಭಯೋತ್ಪಾದಕ ಸಂಘಟನೆಯ ಗುಂಪಿನ ಪ್ರಮುಖ ಸದಸ್ಯ ಅಶ್ರಫ್​​​ ಡ್ಯಾನಿಷ್ ಎಂಬಾತ ಭಾರತದಿಂದ ಪಾಕ್ ಮೂಲದ ವ್ಯಕ್ತಿಗಳೊಂದಿಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್​ಗಳ ಮೂಲಕ ಸಂಪರ್ಕ ಸಾಧಿಸುತ್ತಿದ್ದ. ಈ ಮೂಲಕ ಭಾರತದಲ್ಲಿ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡಲು ಮತ್ತು ಅವರನ್ನು ತಮ್ಮ ಜಾಲಕ್ಕೆ ಸೇರಿಸಿಕೊಳ್ಳಲು ಯತ್ನಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಗುಂಪು ದೇಶದಲ್ಲಿ ಕೋಮು ದ್ವೇಷ ಹರಡಲು ಮತ್ತು ಧಾರ್ಮಿಕ ಸಾಮರಸ್ಯ ಕದಡಲು ಹಲವು ಆನ್‌ಲೈನ್ ಗುಂಪುಗಳನ್ನು ನಡೆಸುತ್ತಿತ್ತು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.


ಇನ್ನೂ 4ರಿಂದ 5 ರಾಜ್ಯಗಳಲ್ಲಿ ದಾಳಿ ನಡೆಸಲಾಗುವುದು. ಸುಮಾರು ಎಂಟು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ, ಐವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ದೆಹಲಿ ಮತ್ತು ಓರ್ವನನ್ನು ಮಧ್ಯಪ್ರದೇಶ, ಹೈದರಾಬಾದ್​ ಹಾಗೂ ರಾಂಚಿಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್