LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಲಡಾಖ್‌ ಎಲ್‌ಎಸಿ ಬಳಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಐವರು ಯೋಧರು!

ಲಡಾಖ್: ಕೇಂದ್ರಾಡಳಿತ ಪ್ರದೇಶ ಲಡಾಖ್ ನ ವಾಸ್ತವ ನಿಯಂತ್ರಣ ರೇಖೆ (ಎಲ್ ಎಸಿ) ಬಳಿ ಶನಿವಾರ ದುರ್ಘಟನೆಯೊಂದು ಜರುಗಿದೆ. ಶನಿವಾರ ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ ಬಳಿ (ಎಲ್ ಎಸಿ) ಬಳಿ T-72 ಟ್ಯಾಂಕ್ ನಲ್ಲಿ ನದಿಯೊಂದನ್ನು ದಾಟುತ್ತಿದ್ದಾಗ ಹಠಾತ್ ಪ್ರವಾಹ ಉಂಟಾಗಿದ್ದು, ಐವರು ಯೋಧರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಲೇಹ್‌ನಿಂದ 148 ಕಿಲೋಮೀಟರ್‌ ದೂರದಲ್ಲಿರುವ ಮಂದಿರ್‌ ಮೋರ್‌ ಬಳಿ ಬೆಳಗ್ಗೆ 1 ಗಂಟೆ ಸುಮಾರಿಗೆ ಟ್ಯಾಂಕ್ ನೊಂದಿಗೆ ನದಿಯನ್ನು ದಾಟುವ ಅಭ್ಯಾಸ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಸೇನಾ ಟ್ಯಾಂಕ್ ಅಪಘಾತಕ್ಕೀಡಾಗಿದ್ದು, ನದಿಯ ಆಳವಾದ ಭಾಗವನ್ನು ದಾಟುತ್ತಿದ್ದಾಗ ಸಿಲುಕಿಕೊಂಡಿತ್ತು. ಈ ವೇಳೆ ಏಕಾಏಕಿ ನೀರಿನ ಮಟ್ಟ ಏರಿದ್ದರಿಂದ ಸೈನಿಕರು ಕೊಚ್ಚಿ ಹೋಗಿದ್ದಾರೆ.

ಭಾರತದಲ್ಲಿ 24,00 ಟಿ-72 ಟ್ಯಾಂಕ್‌ಗಳಿವೆ. ಭಾರತೀಯ ಸೇನೆಯು ಈ ಟ್ಯಾಂಕ್‌ಗಳನ್ನು ಬಹಳ ಹಿಂದಿನಿಂದಲೂ ಬಳಸುತ್ತಿದೆ. ಅಪಘಾತದ ಸಮಯದಲ್ಲಿ ಇತರ ಟ್ಯಾಂಕ್‌ಗಳು ಸಹ ಅಲ್ಲಿದ್ದವು. . ಎಲ್ಲ ಐದು ಸೈನಿಕರ ಶವಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ ಎಂದು ಸೇನಾ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ. ಹಿಮ ಕರಗುವಿಕೆಯಿಂದಾಗಿ ನೀರಿನ ಮಟ್ಟ ಇದ್ದಕ್ಕಿದ್ದಂತೆ ಹೆಚ್ಚಾಗಿದೆ ಎಂದು ಊಹಿಸಲಾಗಿದೆ. ಶ್ಯೋಕ್ ಸಿಂಧೂ ನದಿಯ ಉಪನದಿಯಾಗಿದೆ.

ಘಟನೆ ಬಗ್ಗೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ʼʼಲಡಾಕ್‌ನಲ್ಲಿ ನದಿ ದಾಟುವಾಗ ಸಂಭವಿಸಿದ ಅಪಘಾತದಲ್ಲಿ ನಮ್ಮ ಐವರು ಧೈರ್ಯಶಾಲಿ ಸೈನಿಕರು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ನಮ್ಮ ಸೈನಿಕರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಈ ದುಃಖದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ದೃಢವಾಗಿ ನಿಲ್ಲುತ್ತದೆʼʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್