Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫ್ಲೋರೆನ್ಸ್ ನೈಟಿಂಗೇಲ್ ಅವರ ನೆನಪು ಸದಾ ಸ್ಮರಣೀಯ; ಶ್ರೀಶೈಲ ಹೊಸೂರ

ರಾಯಬಾಗ,

ಎರಡನೇ ಮಹಾಯುದ್ಧದ ವೇಳೆ ಗಾಯಗೊಂಡ ಸೈನಿಕರ ಶೂಶ್ರೂಷಾ ಸೇವೆಯಲ್ಲಿ ತೊಡಗಿದ ಫ್ಲೋರೆನ್ಸ್ ನೈಟಿಂಗೇಲ್ ಅವರ ಜನ್ಮ ದಿನವನ್ನು ಮೇ.೧೨ ರಂದು ಅಂತರರಾಷ್ಟ್ರೀಯ ಶೂಶ್ರೂಷಾಧಿಕಾರಿಗಳ (ದಾದಿಯರ್) ದಿನವಾಗಿ ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ ಎಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶೂಶ್ರೂಷಕ ಶ್ರೀಶೈಲ ಹೊಸೂರ ಹೇಳಿದರು.

ಮಂಗಳವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ದಾದಿಯರ (ನರ್ಸ್) ದಿನ ನಿಮಿತ್ಯ ಫ್ಲೋರೆನ್ಸ್ ನೈಟಿಂಗೇಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕೇಕ್ ಕತ್ತರಿಸಿ ಮಾತನಾಡಿದ ಅವರು, ಮಾನವರ ಆರೋಗ್ಯ ಬದುಕಿನ ಅಮೂಲ್ಯ ಸಮಯವಾಗಿದ್ದು, ತಮ್ಮ ಇಡೀ ಜೀವನವನ್ನು ರೋಗಿಗಳ ಸೇವೆಗೆ ಮುಡುಪಾಗಿಟ್ಟವರು ಫ್ಲೋರೆನ್ಸ್ ನೈಟಿಂಗೇಲ್ ಅವರ ನೆನಪು ಸದಾ ಸ್ಮರಣೀಯ. ದೇಶ, ಭಾಷೆ, ಗಡಿ, ಹೆಣ್ಣು, ಗಂಡು ಎಂಬ ತಾರತಮ್ಯ ಮಾಡದೇ, ಎಲ್ಲರನ್ನು ಸಮಾನವಾಗಿ ಕಂಡು, ಸಕಲರ ಆರೋಗ್ಯ ಸೇವೆಯಲ್ಲಿ ನಿರತರಾದವರು ಶೂಶ್ರೂಷಕರು ಮಾತ್ರ ಎಂದರು.

Advertisement

ಹಿರಿಯ ಶೂಶ್ರೂಷಾಧಿಕಾರಿ ಶೋಭಾ ಸಂಕನ್ನವರ ಮಾತನಾಡಿದರು. ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ವಿನೋದ ಘಸ್ತಿ ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಶ್ರೀಹರಿ ಪೋಳ, ಡಾ. ಸತೀಶ ಕಲ್ಲಟ್ಟಿ. ಡಾ. ಸಿದ್ದಾರ್ಥ ಮಗದುಮ್ಮ, ಆಯುಷ್ ವಿಭಾಗದ ವೈದ್ಯಾಧಿಕಾರಿ ಡಾ. ಸದಾಶಿವ ಖನದಾಳೆ, ಶೀತಲ ಚೌಗಲಾ, ವೀರೂಪಾಕ್ಷಿ ಕರಣಿ, ನಂದಕುಮಾರ ಪಾಟೀಲ, ಕೃಷ್ಣಾ ಚವ್ಹಾಣ, ನಾಜೀಯಾ ಜಿನಾಬಡೆ, ವಿಜಯಲಕ್ಷ್ಮೀ ಎನ್, ವಿ.ವಿ.ಮುರನಾಳ, ರೇಣುಕಾ ಶಾಪೂರ, ಅನಿತಾ ರಾಠೋಡ, ಸತೀಶ ರೂಗಿ, ವಿಠಲ ಗೆನ್ನೂರ, ಆದಂ ಅಗಸನಾಳ, ಚಂದ್ರು ಗಾಯಕವಾಡ, ಸವಿತಾ ಕಟ್ಟಿಮನಿ ಹಾಗೂ ಇತರರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*