LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಫುಟ್ಬಾಲ್ ಕ್ರೀಡಾಕೂಟ

 

ಬಳ್ಳಾರಿ,ಜೂ.15 : ಜಾಗತಿಕ ಕ್ರೀಡಾಕೂಟವಾದ ‘ಫೀಫಾ’ ದ ಆಯೋಜನೆ, ಸಂಘಟನೆ, ನಿಯಮಗಳು ಪ್ರತಿ ಕ್ರೀಡಾಪಟುವಿಗೆ ನೈಜ ಅನುಭವ ಹಾಗೂ ಜೀವನಪಾಠ ಹೇಳಿಕೊಡುತ್ತವೆ ಎಂದು ವಿವಿಯ ಕುಲಸಚಿವ ಪ್ರೊ ವಿ ಲೋಕೇಶ್ ಹೇಳಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ವತಿಯಿಂದ ವಿಶ್ವವಿದ್ಯಾಲಯದಲ್ಲಿ “ಫಿಫಾ ವಿಶ್ವಕಪ್ 2026’’ ರ ನಿಮಿತ್ತ ನಡೆಸಿದ ವಿಭಾಗೀಯ ಪುಟ್ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಶನಿವಾರ ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಗುಂತಕಲ್ ರೈಲ್ವೆ ವಿಭಾಗದ ಹಿರಿಯ ತಾಂತ್ರಿಕರು ಹಾಗೂ ಪುಟ್ಬಾಲ್ ಕ್ರೀಡಾಪಟು ಆಗಿರುವ ಚಂದ್ರಮೌಳಿ ಅವರು ಭಾಗವಹಿಸಿ ಮಾತನಾಡಿ, ಕ್ರೀಡೆಯನ್ನು ಪ್ರತಿಯೋಬ್ಬರು ಧನಾತ್ಮಕವಾಗಿ ಸ್ವೀಕರಿಸಬೇಕು ಹಾಗೂ ಕ್ರೀಡಾ ನಿಯಮಗಳನ್ನು ಪಾಲಿಸುವುದರ ಮೂಲಕ ಕ್ರೀಡಾಸ್ಪೂರ್ತಿಯನ್ನು ಮೆರೆಯಬೇಕು ಎಂದರು.

ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಸ್ಪೂರ್ತಿ ಕೆ.ಜಿ. ಅವರು ಮಾತನಾಡಿ, ನಿರಂತರವಾಗಿ ಕ್ರೀಡೆಯನ್ನು ಆಡುವುದರಿಂದ ವ್ಯಕ್ತಿತ್ವದಲ್ಲಿ ಪರಿಪೂರ್ಣತೆ ಕಾಣಬಹುದು ಹಾಗೂ ಉತ್ತಮ ತರಬೇತಿ ಪಡೆಯುವುದರ ಮೂಲಕ ಕ್ರೀಡಾ ಸಾಧನೆ ಮಾಡಬಹುದು ಎಂದರು.

ವಿಭಾಗದ ಮುಖ್ಯಸ್ಥ ಡಾ.ಸಂಪತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಡಾ. ಶಶಿಧರ ಕೆಲ್ಲೂರ ಸ್ವಾಗಿತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು, ರಾಜೇಶ್ ವಂದಿಸಿದರು.

ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಎಂ.ಪಿ.ಇಡಿ. ವಿದ್ಯಾರ್ಥಿಗಳು ಭಾಗವಹಿಸಿದ್ದರು.  

ಈ ಪುಟ್ಬಾಲ್ ಕ್ರೀಡಾಕೂಟದಲ್ಲಿ ಅಭಿನವ ಬಿಂದ್ರಾ ತಂಡದವರು ಚಾಂಪಿಯನ್ ಆಗಿ ಟ್ರೋಫಿ ಸ್ವೀಕರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್