LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸದ್ಯಕ್ಕೆ ಸಿದ್ದರಾಮಯ್ಯ ಬದಲಾವಣೆ ವಿಚಾರ ಅನಗತ್ಯ: ಕೆ.ಎಂ.ರಾಮಚಂದ್ರಪ್ಪ

ಬೆಂಗಳೂರು: ಸತೀಶ್ ಜಾರಕಿಹೊಳಿ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಈ ಮೂವರಲ್ಲಿ ಯಾರೇ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರೂ ಅವರಿಗೆ ನಮ್ಮ ಬೆಂಬಲವಿದೆ ಎಂದು ಶೋಷಿತ ಸಮುದಾಯ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ ಹೇಳಿದರು.

ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಚಂದ್ರಪ್ಪ, ಮುಂದೆ ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಅನ್ನುವುದಕ್ಕಿಂತ ಸದ್ಯಕ್ಕೆ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬಾರದು ಎಂದರು.

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕ್ರಿಯೆಗೆ ಕಿಡಿಕಾರಿದ ಅವರು, ಸಿದ್ದರಾಮಯ್ಯ ಅವರ ಹೆಸರನ್ನು ಅನಗತ್ಯವಾಗಿ ಸೈಟ್ ಅಕ್ರಮದ ಹೆಸರಲ್ಲಿ ತಳುಕು ಹಾಕಲಾಗುತ್ತಿದೆ. ಅದರೆ ಈ ಹಿಂದೆ ನಡೆದಿರುವ ಅಕ್ರಮ ಸೈಟ್ ಹಂಚಿಕೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇದೆಲ್ಲವೂ ಬಿಜೆಪಿ, ಜೆಡಿಎಸ್ ರಾಜಕೀಯ ಕುತಂತ್ರ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರದ ಕೈಗೊಂಬೆಯಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ ಹೀಗಾಗಿ ಈ ಮುಂದೆ ಗೆಹ್ಲೋಟ್ ಹಾಜರಾರುವ ಎಲ್ಲ ವಿಶ್ವವಿದ್ಯಾಲಯಗಳ ಘಟಿಕೋತ್ಸವದಲ್ಲಿಯೂ ಪ್ರತಿಭಟಿಸಲು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದರು.

ಒಕ್ಕೂಟದ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ಪ್ರತಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರನ್ನು ತೊಲಗಿಸಿ, ಕರ್ನಾಟಕವನ್ನು ರಕ್ಷಿಸಿ ಅನ್ನುವ ಘೋಷ ವಾಕ್ಯದೊಂದಿಗೆ ಗೆಹ್ಲೋಟ್ ವಿರುದ್ಧ ರಾಜ್ಯಾದ್ಯಂತ ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟಿಸಲು ಶೋಷಿತ ಸಮುದಾಯ ನಿರ್ಧರಿಸಿದೆ ಎಂದರು.

ಒಕ್ಕೂಟದ ಇನ್ನೊಬ್ಬ ಮುಖಂಡ ಅನಂತ ನಾಯ್ಕ್ ಮಾತನಾಡಿ ಸಿದ್ದರಾಮಯ್ಯ ಅವರ ಸುಗಮ ಆಡಳಿತ ಸಹಿಸದ ಬಿಜೆಪಿ ಮತ್ತು ಜೆಡಿಎಸ್ ಅನಗತ್ಯವಾಗಿ ಸಿದ್ದರಾಮಯ್ಯ ಅವರ ಆಡಳಿತ ಶಕ್ತಿಯನ್ನು ಕುಂದಿಸುವ ಕುತಂತ್ರ ನಡೆಸುತ್ತಿದೆ. ಸಂಬಂಧವೇ ಇಲ್ಲದ ಅಕ್ರಮದಲ್ಲಿ ಸಿದ್ದರಾಮಯ್ಯ ಅವರ ಹೆಸರನ್ನು ತಳಕು ಹಾಕಿ ರಾಜಕೀಯ ಜೀವನಕ್ಕೆ ಧಕ್ಕೆ ತರಲು ಬಿಜೆಪಿ ಮತ್ತು ಜೆಡಿಎಸ್ ಕುತಂತ್ರದ ರಾಜಕಾರಣ ನಡೆಸುತ್ತಿದೆ ಎಂದು ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಶೋಷಿತ ಸಮುದಾಯ ಮಹಾ ಒಕ್ಕೂಟದ ಪ್ರಮುಖರು, ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ