LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಾರ್ವಜನಿಕರಿಗಾಗಿ ಚೆನ್ನಮ್ಮ ವ್ರತ್ತದಲ್ಲಿ ಕುಡಿಯುವ ನೀರಿನ ಅರವಟಿಗೆ ವ್ಯವಸ್ಥೆ

ಸಂಕೇಶ್ವರ : ಬೇಸಿಗೆ ದಾಹ ತಣಿಸುವ ಉದ್ದೇಶದಿಂದ ಚನ್ನಮ್ಮ ಸರ್ಕಲ್ ನಲ್ಲಿ ಪುರಸಭೆ ವತಿಯಿಂದ ಮಡಿಕೆಯಲ್ಲಿ ನೀರು ಹಾಕಿ ತಂಪಾದ ಕುಡಿಯುವ ನೀರಿನ ಅರವಟಿಗೆ ಇಟ್ಟು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಚನ್ನಮ್ಮ ಸರ್ಕಲ್ ನಲ್ಲಿನ ರಸ್ತೆಯಲ್ಲಿ ನಿತ್ಯ ಸಾವಿರಾರು ಜನರು ಓಡಾಟ ನಡೆಸುತ್ತಿರುತ್ತಾರೆ. ಬಿಸಿಲ ಧಗೆಯಿಂದ ಬಾಯಾರಿ ಬಂದವರು ಇಲ್ಲಿ ಸ್ವಲ್ಪ ಹೊತ್ತು ತಂಗಿ, ಇಲ್ಲಿ ಇಡಲಾದ ತಂಪಾದ ಕುಡಿಯುವ ನೀರು ಸೇವಿಸಿ ದಾಹ ತಣಿಸಿಕೊಳ್ಳುತ್ತಿದ್ದಾರೆ.
ಚನ್ನಮ್ಮ ಸರ್ಕಲ್ ಬಳಿ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಪುರಸಭೆ ವತಿಯಿಂದ ಟೆಂಟ್ ನಿರ್ಮಿಸಿ ಅದರಲ್ಲಿ  ಜನರಿಗೆ ಕುಳಿತುಕೊಳ್ಳಲು ಕುರ್ಚಿಯನ್ನು ಸಹ ಇಡುವ ವ್ಯವಸ್ಥೆಯನ್ನು ಮಾಡಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತತ್ತರಿಸುತ್ತಿರುವ ಜನರಿಗೆ ಈ ವ್ಯವಸ್ಥೆಯು ಸಾರ್ವಜನಿಕರಿಗೆ ಅನುಕೂಲಕರವಾಗಲಿ ಎಂದು ಪುರಸಭೆಯ ಆರೋಗ್ಯಕಿರು ನೀರಿಕ್ಷಕರಾದ ಶ್ರೀಧರ ಬೆಳವಿ ತಿಳಿಸಿದರು.
ಈ‌ ಸಂಧರ್ಭದಲ್ಲಿ ಪುರಸಭೆಯ ಸಿಬ್ಬಂದಿಗಳಾದ ಕೃಷ್ಣಾ ಖಾತೆದಾರ, ಪರುಶರಾ ಪಾಟೀಲ, ಪೌರಕಾರ್ಮಿಕರಾದ ಮಂಗಲ ತಮ್ಮಣ್ಣವರ, ಪ್ರಕಾಶ ಸತ್ಯನಾಯಿಕ ಸೇರಿದಂತೆ ಅನೇಕರು ಇದ್ದರು.
ಸದ್ಯ ಬಿಸಿಲಿನ ಪ್ರಖರತೆ ಅಧಿಕವಾಗುತ್ತಿದ್ದು ಪಟ್ಟಣದಲ್ಲಿ ಅಧಿಕವಾಗಿ ಸಾರ್ವಜನಿಕರ ಓಡಾಟ ನಡೆಸುವ ಪ್ರದೇಶದಲ್ಲಿ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್